ಮಂಗಳೂರು: ಕರಾವಳಿ ಜನ ತುಂಬಾ ಸ್ವಾಭಿಮಾನಿಗಳು. ಇಲ್ಲಿಯ ಜನ ಅಷ್ಟು ಬೇಗ ಯಾರನ್ನೂ ಇಷ್ಟಪಡಲ್ಲ. ಆದರೂ ನಿಮ್ಮ ಮನಸಿನಲ್ಲಿ ನನಗೆ ಜಾಗ ಕೊಟ್ಟಿದ್ದೀರಿ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಿರೂಪಕರು ಆಗಿನಿಂದ ನಮ್ಮ ತುಳುನಾಡಿಗೆ, ನಮ್ಮ ತುಳುನಾಡಿಗೆ ಸ್ವಾಗತ ಅಂತ ನಮ್ಮನ್ನು ಹೊರಗಿನವರು ಅಂತ ಮಾಡ್ತಿದ್ದಾರೆ. ತುಳುನಾಡು ನಮ್ಮ ಕರ್ನಾಟಕದಲ್ಲಿದೆ, ಕರ್ನಾಟಕ ನಮ್ಮ ಹೃದಯದಲ್ಲಿದೆ ತಾನೇ. ಮತ್ತೆ ಮಾತ್ ಮಧ್ಯೆ ಹೆಳ್ತಾರೆ ನಾವು ಅರ್ಧ ಈ ಕಡೆಯವರು ಅಂತ ಎಂದು ಕಿಚಾಯಿಸಿದರು.
ನನ್ನ ಅಪ್ಪಂಗೆ ಕರ್ನಾಟಕದ ಕರಾವಳಿ ಹುಡುಗಿನೇ ಇಷ್ಟ ಆಗಿದ್ದು. ಕರಾವಳಿ ಜನ ತುಂಬ ಸ್ವಾಭಿಮಾನಿಗಳು. ಇಲ್ಲಿಯ ಜನ ಅಷ್ಟು ಬೇಗ ಯಾರನ್ನು ಇಷ್ಟಪಡಲ್ಲ, ಅದ್ರು ನಿಮ್ಮ ಮನಸ್ಸಿನಲ್ಲಿ ನಂಗೆ ಜಾಗ ಕೊಟ್ಟಿದ್ದೀರಿ. ನಾನು ಗೌರವ ಪಡೆಯಲು ಬಂದಿಲ್ಲ. ನಿಮ್ಮ ಪ್ರೀತಿಗೆ ಬಂದಿದ್ದೇನೆ. ನನ್ನ ತಾಯಿ ಕರಾವಳಿಯವರು. ಅವರು ಚೆನ್ನಾಗಿ ತುಳು ಮಾತಾಡ್ತಾರೆ. ನನಗೆ ತುಳು ಅಷ್ಟೊಂದು ಬರಲ್ಲ ಎಂದರು.
ಕನ್ನಡ ಚಿತ್ರರಂಗಕ್ಕೆ ಕರಾವಳಿಗರು ಬಂದು ಕನ್ನಡ ಯಾವುದು ತುಳು ಯಾವುದು ಗೊತ್ತಾಗ್ತಾ ಇಲ್ಲ. ತುಳು ಚಿತ್ರರಂಗ ಬೆಂಗಳೂರಿಗೆ ಬಂದದ್ದು ತುಂಬಾ ಖುಷಿಯಾಗಿದೆ. ಯಕ್ಷಗಾನ ಕಲೆ ಎದುರು ನಾವು ಇನ್ನೂ ಚಿಕ್ಕವರು. ಪಟ್ಲ ಫೌಂಡೇಷನ್ ದೊಡ್ಡ ಸಾಧನೆ ಮಾಡಿದೆ. 8 ವರ್ಷದಲ್ಲಿ 11 ಕೋಟಿ ಮೊತ್ತ ಬಡವರಿಗೆ ಸಹಾಯ ಮಾಡಿದ್ದಾರೆ. ಯಕ್ಷಗಾನ ಕಲಾವಿದ ಪಟ್ಲ ಸತೀಶ್ ಶೆಟ್ಟಿ ಸಾಧನೆ ಅಪಾರವಾದ್ದು ಎಂದು ಕಿಚ್ಚ ಸುದೀಪ್ ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…