Featured

ಮಂಗಳೂರು: ಕರಾವಳಿ ಜನ ತುಂಬಾ ಸ್ವಾಭಿಮಾನಿಗಳು, ಯಾರನ್ನೂ ಅಷ್ಟು ಬೇಗ ಇಷ್ಟಪಡಲ್ಲ :ಕಿಚ್ಚ ಸುದೀಪ್ – vishwanews24

ಮಂಗಳೂರು: ಕರಾವಳಿ ಜನ ತುಂಬಾ ಸ್ವಾಭಿಮಾನಿಗಳು, ಯಾರನ್ನೂ ಅಷ್ಟು ಬೇಗ ಇಷ್ಟಪಡಲ್ಲ :ಕಿಚ್ಚ ಸುದೀಪ್

ಮಂಗಳೂರು: ಕರಾವಳಿ ಜನ ತುಂಬಾ ಸ್ವಾಭಿಮಾನಿಗಳು. ಇಲ್ಲಿಯ ಜನ ಅಷ್ಟು ಬೇಗ ಯಾರನ್ನೂ ಇಷ್ಟಪಡಲ್ಲ. ಆದರೂ ನಿಮ್ಮ ಮನಸಿನಲ್ಲಿ ನನಗೆ ಜಾಗ ಕೊಟ್ಟಿದ್ದೀರಿ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ.

ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಿರೂಪಕರು ಆಗಿನಿಂದ ನಮ್ಮ ತುಳುನಾಡಿಗೆ, ನಮ್ಮ ತುಳುನಾಡಿಗೆ ಸ್ವಾಗತ ಅಂತ ನಮ್ಮನ್ನು ಹೊರಗಿನವರು ಅಂತ ಮಾಡ್ತಿದ್ದಾರೆ. ತುಳುನಾಡು ನಮ್ಮ ಕರ್ನಾಟಕದಲ್ಲಿದೆ, ಕರ್ನಾಟಕ ನಮ್ಮ ಹೃದಯದಲ್ಲಿದೆ ತಾನೇ. ಮತ್ತೆ ಮಾತ್ ಮಧ್ಯೆ ಹೆಳ್ತಾರೆ ನಾವು ಅರ್ಧ ಈ ಕಡೆಯವರು ಅಂತ ಎಂದು ಕಿಚಾಯಿಸಿದರು.

ನನ್ನ ಅಪ್ಪಂಗೆ ಕರ್ನಾಟಕದ ಕರಾವಳಿ ಹುಡುಗಿನೇ ಇಷ್ಟ ಆಗಿದ್ದು. ಕರಾವಳಿ ಜನ ತುಂಬ ಸ್ವಾಭಿಮಾನಿಗಳು. ಇಲ್ಲಿಯ ಜನ ಅಷ್ಟು ಬೇಗ ಯಾರನ್ನು ಇಷ್ಟಪಡಲ್ಲ, ಅದ್ರು ನಿಮ್ಮ ಮನಸ್ಸಿನಲ್ಲಿ ನಂಗೆ ಜಾಗ ಕೊಟ್ಟಿದ್ದೀರಿ. ನಾನು ಗೌರವ ಪಡೆಯಲು ಬಂದಿಲ್ಲ. ನಿಮ್ಮ ಪ್ರೀತಿಗೆ ಬಂದಿದ್ದೇನೆ. ನನ್ನ ತಾಯಿ ಕರಾವಳಿಯವರು. ಅವರು ಚೆನ್ನಾಗಿ ತುಳು ಮಾತಾಡ್ತಾರೆ. ನನಗೆ ತುಳು ಅಷ್ಟೊಂದು ಬರಲ್ಲ ಎಂದರು.

ಕನ್ನಡ ಚಿತ್ರರಂಗಕ್ಕೆ ಕರಾವಳಿಗರು ಬಂದು ಕನ್ನಡ ಯಾವುದು ತುಳು ಯಾವುದು ಗೊತ್ತಾಗ್ತಾ ಇಲ್ಲ. ತುಳು ಚಿತ್ರರಂಗ ಬೆಂಗಳೂರಿಗೆ ಬಂದದ್ದು ತುಂಬಾ ಖುಷಿಯಾಗಿದೆ. ಯಕ್ಷಗಾನ ಕಲೆ ಎದುರು ನಾವು ಇನ್ನೂ ಚಿಕ್ಕವರು. ಪಟ್ಲ ಫೌಂಡೇಷನ್ ದೊಡ್ಡ ಸಾಧನೆ ಮಾಡಿದೆ. 8 ವರ್ಷದಲ್ಲಿ 11 ಕೋಟಿ ಮೊತ್ತ ಬಡವರಿಗೆ ಸಹಾಯ ಮಾಡಿದ್ದಾರೆ. ಯಕ್ಷಗಾನ ಕಲಾವಿದ ಪಟ್ಲ ಸತೀಶ್ ಶೆಟ್ಟಿ ಸಾಧನೆ ಅಪಾರವಾದ್ದು ಎಂದು ಕಿಚ್ಚ ಸುದೀಪ್ ತಿಳಿಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

13 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago