Featured

ಮಂಗಳೂರು : ಕರಾವಳಿ ದೈವಸ್ಥಾನಗಳಿಗೆ ಕಾಂತಾರ ನಟಿ  ಸಪ್ತಮಿ ಗೌಡ , ಕೊರಗಜ್ಜನ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಟಿ  – Vishwanews24

ಮಂಗಳೂರು : ಕರಾವಳಿ ದೈವಸ್ಥಾನಗಳಿಗೆ ಕಾಂತಾರ ನಟಿ ಸಪ್ತಮಿ ಗೌಡ , ಕೊರಗಜ್ಜನ ಆದಿಸ್ಥಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ನಟಿ

ಮಂಗಳೂರು : ಕಾಂತಾರ ಚಿತ್ರ 50ನೇ ದಿನ ಪೂರೈಸಿದ ದಾಖಲೆ ಬರೆಯುತ್ತಿರುವ ಬೆನ್ನಲ್ಲೇ ಕಾಂತಾರದ ನಟಿ ಲೀಲಾ ಇದೀಗ ಕರಾವಳಿಯ ದೈವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ.

ಮಂಗಳೂರಿನ ಕಲ್ಲಾಪು ಬಳಿಯ ಬುರ್ದುಗೋಳಿಯ ಗುಳಿಗ ದೈವಸ್ಥಾನ, ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳ ಹಾಗೂ ಈ ಭಾಗದ ಕೆಲವು ದೈವಸ್ಥಾನಗಳಿಗೆ ಭೇಟಿ ನೀಡಿದ್ದಾರೆ. ಕುಟುಂಬ ಸದಸ್ಯರು, ಸಿನಿಮಾದ ಸಹನಟರು ಹಾಗೂ ಸ್ನೇಹಿತರೊಂದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಬುರ್ದುಗೋಳಿ ಆದಿಸ್ಥಳ ಕ್ಷೇತ್ರದ ಸಮಿತಿ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್ ಅವರು ಸಪ್ತಮಿ ಗೌಡ ಅವರನ್ನ ಬರಮಾಡಿ ಕ್ಷೇತ್ರದ ಐತಿಹ್ಯವನ್ನ ತಿಳಿಸಿದರು.

ಮಿಸ್ ತುಳುನಾಡು’ ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಹಿತಾ ಸುವರ್ಣ ಪ್ರಥಮ – Vishwanews24

ಈ ವೇಳೆ ಮಾತನಾಡಿದ ಸಪ್ತಮಿ ಗೌಡ, ವಿಶ್ವದಾದ್ಯಂತ ಕಾಂತಾರ ಸದ್ದು ಮಾಡುತ್ತಿದೆ. ಸಿನಿಮಾ ನಿರ್ಮಾಣದ ವೇಳೆ ಕರಾವಳಿ ಭಾಗದ ಆಚರಣೆ, ಸಂಸ್ಕೃತಿ, ದೈವಾರಾಧನೆ ಬಗ್ಗೆ ನಾನು ತಿಳಿದುಕೊಂಡೆ. ಇತ್ತೀಚಿಗೆ ನಡೆದ ವೈಯಕ್ತಿಕ ಘಟನೆಯೊಂದು ದೈವಗಳ ಬಗ್ಗೆ ಹುಟ್ಟಿದ ನಂಬಿಕೆ ಗಟ್ಟಿಯಾಗುವಂತೆ ಮಾಡಿದೆ.

ಈಗಾಗಲೇ ಸಿನಿಮಾಗಳಲ್ಲಿ ನಟಿಸಲು ಸಾಕಷ್ಟು ಅವಕಾಶಗಳು ಬಂದಿದ್ದು, ಸ್ಕ್ರಿಪ್ಟ್ ರೀಡಿಂಗ್ ನಡೀತಾ ಇದೆ. ಜನರ ಪ್ರೀತಿಯಿಂದ ಜಗತ್ತಿನಾದ್ಯಂತ ಕಾಂತಾರ ಹೌಸ್ ಫುಲ್ ಆಗಿ ಓಡುತ್ತಿದ್ದು, ತುಳುನಾಡಿನ ದೈವಗಳ ಆಶೀರ್ವಾದವೇ ಚಿತ್ರಕ್ಕೆ ಶ್ರೀರಕ್ಷೆ ಎಂದರು. ಜಗತ್ತಿನಾದ್ಯಂತ ಕಾಂತಾರ ಚಿತ್ರವು ಹೌಸ್ ಫುಲ್ ಪ್ರದರ್ಶನದೊಂದಿಗೆ 50 ದಿವಸ ಪೂರೈಸುತ್ತಿದ್ದು, ಚಿತ್ರದ ಅದ್ಭುತ ಯಶಸ್ಸಿಗೆ ದೈವಗಳ ಆಶೀರ್ವಾದವೇ ಕಾರಣ ಎಂದರು.

ಅತಿಯಾದ ಆತ್ಮವಿಶ್ವಾಸ ಬೇಡ.. 👉 ನೋಡಿ ಇಂದಿನ ದಿನ ಭವಿಷ್ಯ -Vishwanews24

 

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago