ಮಂಗಳೂರು: ನಗರದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿನ ಮುಖ್ಯ ರಸ್ತೆಯಲ್ಲಿರುವ ಕರ್ಕೇರ ಮೂಲಸ್ಥಾನದ ದೈವಸ್ಥಾನದಲ್ಲಿ ನಡೆದ ಕಳವು ಯತ್ನ ಹಾಗೂ ಮೂರ್ತಿಗಳ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕುಳಾಯಿ ನಿವಾಸಿ ರೋಹಿತಾಶ್ವ ಬಂಧಿತ.
ಆರೋಪಿ ರೋಹಿತಾಶ್ವ ದೈವಸ್ಥಾನದಲ್ಲಿನ ಹಣ, ಮೌಲ್ಯಯುತ ಸೊತ್ತಿನ ಆಸೆಗೆ ಕಳವು ಕೃತ್ಯ ನಡೆಸಲು ಮುಂದಾಗಿದ್ದಾನೆ. ಆದರೆ, ಏನೂ ದೊರಕದಿರುವ ಹಿನ್ನೆಲೆಯಲ್ಲಿ ಅಲ್ಲಿನ ಮೂರ್ತಿಗಳನ್ನು ಧ್ವಂಸಗೊಳಿಸಲು ಯತ್ನಿಸಿದ್ದಾನೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಆರೋಪಿ ದೈವಸ್ಥಾನದ ಕಾಣಿಕೆ ಡಬ್ಬಿ ಮತ್ತು ಕಚೇರಿ ಒಳಗಿರುವ ಕಪಾಟುಗಳನ್ನು ಜಾಲಾಡಿದ್ದಾನೆ. ಆದರೆ, ಏನೂ ದೊರಕದಿದ್ದಾಗ ಹತಾಶೆಗೊಂಡು ಅಲ್ಲಿದ್ದ ಶಿವಲಿಂಗ, ನಾಗದೇವರ ಮೂರ್ತಿಗಳನ್ನು ಧ್ವಂಸಗೊಳಿಸಿದ್ದಾನೆ. ಈ ಸಂಬಂಧ ಅ. 17ರಂದು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…