ಮಂಗಳೂರು: ನಗರದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿನ ಮುಖ್ಯ ರಸ್ತೆಯಲ್ಲಿರುವ ಕರ್ಕೇರ ಮೂಲಸ್ಥಾನದ ದೈವಸ್ಥಾನದಲ್ಲಿ ನಡೆದ ಕಳವು ಯತ್ನ ಹಾಗೂ ಮೂರ್ತಿಗಳ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕುಳಾಯಿ ನಿವಾಸಿ ರೋಹಿತಾಶ್ವ ಬಂಧಿತ.
ಆರೋಪಿ ರೋಹಿತಾಶ್ವ ದೈವಸ್ಥಾನದಲ್ಲಿನ ಹಣ, ಮೌಲ್ಯಯುತ ಸೊತ್ತಿನ ಆಸೆಗೆ ಕಳವು ಕೃತ್ಯ ನಡೆಸಲು ಮುಂದಾಗಿದ್ದಾನೆ. ಆದರೆ, ಏನೂ ದೊರಕದಿರುವ ಹಿನ್ನೆಲೆಯಲ್ಲಿ ಅಲ್ಲಿನ ಮೂರ್ತಿಗಳನ್ನು ಧ್ವಂಸಗೊಳಿಸಲು ಯತ್ನಿಸಿದ್ದಾನೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಆರೋಪಿ ದೈವಸ್ಥಾನದ ಕಾಣಿಕೆ ಡಬ್ಬಿ ಮತ್ತು ಕಚೇರಿ ಒಳಗಿರುವ ಕಪಾಟುಗಳನ್ನು ಜಾಲಾಡಿದ್ದಾನೆ. ಆದರೆ, ಏನೂ ದೊರಕದಿದ್ದಾಗ ಹತಾಶೆಗೊಂಡು ಅಲ್ಲಿದ್ದ ಶಿವಲಿಂಗ, ನಾಗದೇವರ ಮೂರ್ತಿಗಳನ್ನು ಧ್ವಂಸಗೊಳಿಸಿದ್ದಾನೆ. ಈ ಸಂಬಂಧ ಅ. 17ರಂದು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…