Featured

ಮಂಗಳೂರು: ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಕೊಲೆ ಯತ್ನ ಪ್ರಕರಣ : 6 ಮಂದಿ ಬಂಧನ -Vishwanews24

ಮಂಗಳೂರು: ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಕೊಲೆ ಯತ್ನ ಪ್ರಕರಣ : 6 ಮಂದಿ ಬಂಧನ -Vishwanews24

ಮಂಗಳೂರು, : ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಓರ್ವರಿಗೆ ಕಳೆದ ಡಿಸೆಂಬರ್‌ 16 ರಂದು ಹಾಡುಹಗಲಲ್ಲೇ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನ ಮಾಡಿದ್ದ ಘಟನೆಯು ಮಂಗಳೂರು ಗೋಲಿಬಾರ್‌ ರಿವೇಂಜ್‌ ಎಂಬ ಮಾಹಿತಿ ದೊರೆತಿದ್ದು ಈ ಸಂಬಂಧ 6 ಮಂದಿಯನ್ನು ಬಂಧಿಸಲಾಗಿದೆ.

ಮಂಗಳೂರಿನ ಬಂದರು ಠಾಣಾ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಗಣೇಶ್ ಕಾಮತ್ ಹಾಗೂ ಮಹಿಳಾ ಸಿಬ್ಬಂದಿಯೋರ್ವರು ನಗರದ ನ್ಯೂಚಿತ್ರ ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಇಬ್ಬರಲ್ಲಿ ಓರ್ವ ಬೈಕ್‌ನಿಂದ ಇಳಿದು ಪೊಲೀಸರು ಕುಳಿತುಕೊಂಡಲ್ಲಿಗೆ ಹೋಗಿ ಗಣೇಶ್ ಕಾಮತ್‌ಗೆ ತಲವಾರಿನಿಂದ ದಾಳಿ ನಡೆಸಿ ಬೈಕ್‌ ಏರಿ ಪರಾರಿಯಾಗಿದ್ದರು.

ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಪೊಲೀಸ್‌ ಆಯುಕ್ತ ಶಶಿಕುಮಾರ್‌ ಮಾಹಿತಿ ನೀಡಿದರು.

ಗೊಲೀಬಾರ್‌ನಿಂದ ಕಾನೂನು ಸುವ್ಯವಸ್ಥೆ ಬಗ್ಗೆ ಅಸಮಾಧಾನದ ಹಿನ್ನೆಲೆ ಪೊಲೀಸರ ಮೇಲೆ ಕೊಲೆ ಯತ್ನ ನಡೆಸಲಾಗಿದೆ ಎಂದು ತಿಳಿದು ಬಂದಿದ್ದು ಈ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ. 16 ವರ್ಷದ ಬಾಲಕ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಬಂಟ್ವಾಳ ನಿವಾಸಿ ಮಹಮ್ಮದ್ ನವಾಝ್ (30), ಕುದ್ರೋಳಿ ನಿವಾಸಿ ಅನೀಶ್ ಅಶ್ರಫ್ (22), ಕುದ್ರೋಳಿ ನಿವಾಸಿ ಅಬ್ದುಲ್ ಖಾದರ್ ಫಹಾದ್ (23), ಬಜಪೆ ನಿವಾಸಿ ಶೇಖ್ ಮಹಮ್ಮದ್ ಹ್ಯಾರಿಸ್ ಯಾನಿ ಜಿಗ್ರಿ (31), ಕುದ್ರೋಳಿ ನಿವಾಸಿ ರಾಹಿಲ್ ಯಾನೆ ಚೋಟು ರಾಹಿಲ್ (18), ತಣ್ಣೀರು ಬಾವಿ ನಿವಾಸಿ ಮಹಮ್ಮದ್ ಖಾಯೀಸ್ (24) ಬಂಧಿತರು.

ಕೃತ್ಯದ ಹಿಂದೆ ಮಾಯ ಗ್ಯಾಂಗ್‌ ಮತ್ತು ಇನ್ನೊಂದು ಗ್ಯಾಂಗ್‌ ಭಾಗಿಯಾಗಿದ್ದು ನೈಟ್ರೋವಿಟ್ ಟ್ಯಾಬ್ಲೆಟ್ ಬಳಸಿ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ..

 

http://ಬಾರ್ಡರ್-ಗವಾಸ್ಕರ್ ಟ್ರೋಪಿ : ರಿಷಬ್ ಪಂತ್ ಅದ್ಭುತ ಆಟ : ಆಸ್ಟ್ರೇಲಿಯಾ ವಿರುದ್ಧ ರೋಚಕ ಗೆಲುವು ಸಾಧಿಸಿದ ಭಾರತ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago