Featured

ಮಂಗಳೂರು: ಸಿಇಐಆರ್ ಪೋರ್ಟಲ್ ಮೂಲಕ ಕಳೆದು ಹೋದ ಮೊಬೈಲ್‌ ವಾರಸುದಾರರಿಗೆ ಹಸ್ತಾಂತರ – Vishwanews24

ಮಂಗಳೂರು: ಕಳೆದು ಹೋದ ಮೊಬೈಲ್‌ ಪತ್ತೆಗೆ ಸಿಇಐಆರ್‌ ಪೋರ್ಟಲ್‌ : 39 ಮೊಬೈಲ್‌ ಪೋನ್‌ ವಾರಸುದಾರರಿಗೆ ಹಸ್ತಾಂತರ

ಮಂಗಳೂರು: ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಕಳೆದುಹೋದ/ಕಳವಾದ 39 ಮೊಬೈಲ್‌ಗ‌ಳನ್ನು ಸಿಇಐಆರ್‌ ಪೋರ್ಟಲ್‌ ಮೂಲಕ ಪತ್ತೆ ಹಚ್ಚಲಾಗಿದ್ದು ಅದನ್ನು ಗುರುವಾರದಂದು ಪೊಲೀಸ್‌ ಆಯುಕ್ತರು ವಾರಸುದಾರರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆಯುಕ್ತ ಕುಲದೀಪ್‌ ಕುಮಾರ್‌ ಆರ್‌.ಜೈನ್‌ ಅವರು, ಕಳೆದ 5 ತಿಂಗಳಲ್ಲಿ ಕಮಿಷನರೆಟ್‌ ವ್ಯಾಪ್ತಿಯಲ್ಲಿ 402 ಮಂದಿ ಮೊಬೈಲ್‌ ಕಳೆದುಕೊಂಡಿರುವ ಬಗ್ಗೆ ದೂರು ನೀಡಿದ್ದಾರೆ. ಆ ಪೈಕಿ 124 ಮೊಬೈಲ್‌ಗ‌ಳನ್ನು ಪತ್ತೆ ಹಚ್ಚಲಾಗಿದ್ದು 39 ಮೊಬೈಲ್‌ನ್ನು ಜಪ್ತಿ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗುತ್ತಿದೆ. ಇವುಗಳ ಒಟ್ಟು ಮೌಲ್ಯ ಸುಮಾರು 7 ಲ.ರೂ.ಗಳಾಗಿವೆ. ಉಳಿದ ಮೊಬೈಲ್‌ಗ‌ಳನ್ನು ಕೂಡ ಶೀಘ್ರದಲ್ಲೇ ಜಪ್ತಿ ಮಾಡಲಾಗುವುದು. ಸಿಇಐಆರ್‌ ಪೋರ್ಟಲ್‌ನ್ನು ಪೊಲೀಸರು ಅಥವಾ ಮೊಬೈಲ್‌ ಕಳೆದುಕೊಂಡವರು ನೇರವಾಗಿ ಬಳಕೆ ಮಾಡಬಹುದು. ಇದರಿಂದ ಮೊಬೈಲ್‌ ಪೋನ್‌ ಪತ್ತೆಗೆ ಹಾಗೂ ಅದರ ಮಾಲಕರಿಗೆ ಮರಳಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಏನಿದು ಸಿಇಐಆರ್‌ ಪೋರ್ಟಲ್‌?
ಕಳ್ಳತನ ಅಥವಾ ಬೇರೆ ಯಾವುದೇ ರೀತಿಯಲ್ಲಿ ಮೊಬೈಲ್‌ ಫೋನ್‌ ಕಳೆದುಕೊಂಡರೆ ಅದನ್ನು ಬ್ಲಾಕ್‌ ಮಾಡಲು ಕೇಂದ್ರ ಸರಕಾರದ ದೂರಸಂಪರ್ಕ ಇಲಾಖೆ ಜಾರಿಗೆ ತಂದಿರುವ ಹೊಸ ವಿಧಾನವೇ ಸಿಇಐಆರ್‌ ಪೋರ್ಟಲ್‌(CEIR- Central Equipment Identity Registration Portal). ಮೊಬೈಲ್‌ ಫೋನ್‌ ಕಳೆದುಹೋದ ಕೂಡಲೇ ಹತ್ತಿರದ ಪೊಲೀಸಂ ಠಾಣೆಯಲ್ಲಿ ಅಥವಾ ಕೆಎಸ್‌ಪಿ ಆಯಪ್‌ನಲ್ಲಿ ದೂರು ಸಲ್ಲಿಸಿ ಸ್ವೀಕೃತಿ/ ಡಿಜಿಟಲ್‌ ಇ-ಸ್ವೀಕೃತಿ ಪಡೆದುಕೊಳ್ಳಬೇಕು. ಕಳೆದುಕೊಂಡಿರುವ ಮೊಬೈಲ್‌ ನಂಬರ್‌ನ ನಕಲಿ ಸಿಮ್‌ ಕಾರ್ಡ್‌ನ್ನು ಈ ಹಿಂದೆ ಸೇವೆ ಪಡೆಯುತ್ತಿದ್ದ ಸರ್ವಿಸ್‌ ಪ್ರೊವೈಡರ್‌ನಿಂದ(ಉದಾ: ಏರ್‌ಟೆಲ್‌, ಜಿಯೋ, ಬಿಎಸ್‌ಎನ್‌ಎಲ್‌ ಇತ್ಯಾದಿ) ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಓಟಿಪಿ ಪಡೆಯಲು ಅದನ್ನು ಚಾಲನೆ ಮಾಡಿಟ್ಟುಕೊಳ್ಳಬೇಕು. ಅನಂತರ https://www.ceir.gov.in ವೆಬ್‌ಸೈಟ್‌ನಲ್ಲಿ ಕಳೆದುಕೊಂಡ ಮೊಬೈಲ್‌ ಫೋನ್‌ನ ಮಾಹಿತಿ ನಮೂದಿಸಬೇಕು. ಮಾಹಿತಿ ನಮೂದಿಸಿದ 24 ಗಂಟೆಗಳೊಳಗೆ ಮೊಬೈಲ್‌ಫೋನ್‌ ಬ್ಲಾಕ್‌ ಆಗುತ್ತದೆ. ಒಂದು ವೇಳೆ ಮೊಬೈಲ್‌ ಫೋನ್‌ ಪತ್ತೆಯಾದರೆ CEIR ಪೋರ್ಟಲ್‌ನಲ್ಲಿ ಲಾಗಿನ್‌ ಆಗಿ ಅನ್‌ಬ್ಲಾಕ್‌ ಮಾಡಿ ಉಪಯೋಗಿಸಬಹುದು. ಡಿಸಿಪಿಗಳಾದ ಅಂಶುಕುಮಾರ್‌, ದಿನೇಶ್‌ ಕುಮಾರ್‌, ಎಸಿಪಿ ಪಿ.ಎ ಹೆಗಡೆ ಉಪಸ್ಥಿತರಿದ್ದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago