ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಕಳೆದುಹೋದ/ಕಳವಾದ 39 ಮೊಬೈಲ್ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಲಾಗಿದ್ದು ಅದನ್ನು ಗುರುವಾರದಂದು ಪೊಲೀಸ್ ಆಯುಕ್ತರು ವಾರಸುದಾರರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಅವರು, ಕಳೆದ 5 ತಿಂಗಳಲ್ಲಿ ಕಮಿಷನರೆಟ್ ವ್ಯಾಪ್ತಿಯಲ್ಲಿ 402 ಮಂದಿ ಮೊಬೈಲ್ ಕಳೆದುಕೊಂಡಿರುವ ಬಗ್ಗೆ ದೂರು ನೀಡಿದ್ದಾರೆ. ಆ ಪೈಕಿ 124 ಮೊಬೈಲ್ಗಳನ್ನು ಪತ್ತೆ ಹಚ್ಚಲಾಗಿದ್ದು 39 ಮೊಬೈಲ್ನ್ನು ಜಪ್ತಿ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗುತ್ತಿದೆ. ಇವುಗಳ ಒಟ್ಟು ಮೌಲ್ಯ ಸುಮಾರು 7 ಲ.ರೂ.ಗಳಾಗಿವೆ. ಉಳಿದ ಮೊಬೈಲ್ಗಳನ್ನು ಕೂಡ ಶೀಘ್ರದಲ್ಲೇ ಜಪ್ತಿ ಮಾಡಲಾಗುವುದು. ಸಿಇಐಆರ್ ಪೋರ್ಟಲ್ನ್ನು ಪೊಲೀಸರು ಅಥವಾ ಮೊಬೈಲ್ ಕಳೆದುಕೊಂಡವರು ನೇರವಾಗಿ ಬಳಕೆ ಮಾಡಬಹುದು. ಇದರಿಂದ ಮೊಬೈಲ್ ಪೋನ್ ಪತ್ತೆಗೆ ಹಾಗೂ ಅದರ ಮಾಲಕರಿಗೆ ಮರಳಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಏನಿದು ಸಿಇಐಆರ್ ಪೋರ್ಟಲ್?
ಕಳ್ಳತನ ಅಥವಾ ಬೇರೆ ಯಾವುದೇ ರೀತಿಯಲ್ಲಿ ಮೊಬೈಲ್ ಫೋನ್ ಕಳೆದುಕೊಂಡರೆ ಅದನ್ನು ಬ್ಲಾಕ್ ಮಾಡಲು ಕೇಂದ್ರ ಸರಕಾರದ ದೂರಸಂಪರ್ಕ ಇಲಾಖೆ ಜಾರಿಗೆ ತಂದಿರುವ ಹೊಸ ವಿಧಾನವೇ ಸಿಇಐಆರ್ ಪೋರ್ಟಲ್(CEIR- Central Equipment Identity Registration Portal). ಮೊಬೈಲ್ ಫೋನ್ ಕಳೆದುಹೋದ ಕೂಡಲೇ ಹತ್ತಿರದ ಪೊಲೀಸಂ ಠಾಣೆಯಲ್ಲಿ ಅಥವಾ ಕೆಎಸ್ಪಿ ಆಯಪ್ನಲ್ಲಿ ದೂರು ಸಲ್ಲಿಸಿ ಸ್ವೀಕೃತಿ/ ಡಿಜಿಟಲ್ ಇ-ಸ್ವೀಕೃತಿ ಪಡೆದುಕೊಳ್ಳಬೇಕು. ಕಳೆದುಕೊಂಡಿರುವ ಮೊಬೈಲ್ ನಂಬರ್ನ ನಕಲಿ ಸಿಮ್ ಕಾರ್ಡ್ನ್ನು ಈ ಹಿಂದೆ ಸೇವೆ ಪಡೆಯುತ್ತಿದ್ದ ಸರ್ವಿಸ್ ಪ್ರೊವೈಡರ್ನಿಂದ(ಉದಾ: ಏರ್ಟೆಲ್, ಜಿಯೋ, ಬಿಎಸ್ಎನ್ಎಲ್ ಇತ್ಯಾದಿ) ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಓಟಿಪಿ ಪಡೆಯಲು ಅದನ್ನು ಚಾಲನೆ ಮಾಡಿಟ್ಟುಕೊಳ್ಳಬೇಕು. ಅನಂತರ https://www.ceir.gov.in ವೆಬ್ಸೈಟ್ನಲ್ಲಿ ಕಳೆದುಕೊಂಡ ಮೊಬೈಲ್ ಫೋನ್ನ ಮಾಹಿತಿ ನಮೂದಿಸಬೇಕು. ಮಾಹಿತಿ ನಮೂದಿಸಿದ 24 ಗಂಟೆಗಳೊಳಗೆ ಮೊಬೈಲ್ಫೋನ್ ಬ್ಲಾಕ್ ಆಗುತ್ತದೆ. ಒಂದು ವೇಳೆ ಮೊಬೈಲ್ ಫೋನ್ ಪತ್ತೆಯಾದರೆ CEIR ಪೋರ್ಟಲ್ನಲ್ಲಿ ಲಾಗಿನ್ ಆಗಿ ಅನ್ಬ್ಲಾಕ್ ಮಾಡಿ ಉಪಯೋಗಿಸಬಹುದು. ಡಿಸಿಪಿಗಳಾದ ಅಂಶುಕುಮಾರ್, ದಿನೇಶ್ ಕುಮಾರ್, ಎಸಿಪಿ ಪಿ.ಎ ಹೆಗಡೆ ಉಪಸ್ಥಿತರಿದ್ದರು.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…