Featured

ಮಂಗಳೂರು : ಕಳ್ಳತನ ಅಥವಾ ಕಳೆದುಕೊಂಡ ಫೋನ್‌ ಬ್ಲಾಕ್‌ ಮಾಡಲು ಹೊಸ ವಿಧಾನ ಜಾರಿ : ದ.ಕ.ಎಸ್ಪಿ – Vishwanews24

ಕಳ್ಳತನ ಅಥವಾ ಕಳೆದುಕೊಂಡ ಫೋನ್‌ ಬ್ಲಾಕ್‌ ಮಾಡಲು ಹೊಸ ವಿಧಾನ ಜಾರಿ : ದ.ಕ.ಎಸ್ಪಿ

ಮಂಗಳೂರು : ಕಳುವಾದ ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ ಗಳನ್ನು ಬ್ಲಾಕ್ ಮಾಡುವ ಹೊಸ ವಿಧಾನವನ್ನು ಪೋಲಿಸ್ ಇಲಾಖೆ ಜಾರಿಗೊಳಿಸಿದ್ದು, ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಮಾತೆ ವಿಕ್ರಮ್ ಪ್ರಕಟಣೆ ಹೊರಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕಳುವಾದ/ಕಾಣೆಯಾದ/ಸುಲಿಗೆಯಾದ Mobile Phone ಗಳು ಸೈಬರ್ ಅಪರಾಧ ನಾರ್ಕೋಟಿಕ್ಸ್ ಅಪರಾಧ ಸರಿದಂತೆ ಇತರ ಗಂಭೀರ ಅಪರಾಧಗಳಲ್ಲಿ ಬಳಕೆಯಾಗುತ್ತಿರುವುದು ಗಣನೀಯವಾಗಿ ಕಂಡುಬಂದಿರುತ್ತದೆ. ಇಂತಹ Mobile Phone ಗಳ ದುರ್ಬಳಕೆಯನ್ನು ತಡೆಗಟ್ಟಲು ಕೇಂದ್ರ ಟೆಲಿಕಮ್ಯುನಿಕೇಶನ್ ಇಲಾಖೆಯಿಂದ ಕಳುವಾದ/ಕಾಣಿಯಾದ/ಸುಲಿಗೆಯಾದ Mobile Phone ಗಳನ್ನು ಬ್ಲಾಕ್ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿರುತ್ತದೆ ಹಾಗೂ ಪೊಲೀಸ್ ಇಲಾಖೆಯಿಂದ ಕೂಡಾ ಈ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದೆ.

ಈ ಕೆಳಕಂಡ ವಿಧಾನಗಳನ್ನು ಅನುಸರಿಸುವುದರ ಮೂಲಕ ಕಳುವಾದ ಕಾಣೆಯಾದ ಸುಲಿಗೆಯಾದ Mobile Phone ಗಳನ್ನು ಬ್ಲಾಕ್ ಮಾಡಬಹುದಾಗಿದೆ.

➡️ ನಿಮ್ಮ Mobile Phone ಕಳುವು ಕಾಣೆಯಾದರೆ/ಸುಲಿಗೆಯಾದರೆ ತಾವು ತಕ್ಷಣವೇ KSP E-Lost ಅಪ್ಲಿಕೇಶನ್ ನಲ್ಲಿ ದೂರನ್ನು ಸಲ್ಲಿಸಿ Digital E Acknowledgement ಪಡೆದುಕೊಳ್ಳಬೇಕು, ಅಥವಾ ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ದೂರನ್ನು ಸಲ್ಲಿಸಿ ಸ್ವೀಕೃತಿಯನ್ನು ಪಡೆದುಕೊಳ್ಳುವುದು, ಸ್ವೀಕೃತಿಯ ಪ್ರತಿಯನ್ನು ತಮ್ಮ ಬಳಿ ಇಟ್ಟುಕೊಂಡಿರಬೇಕು.]

➡️ ನೀವು ಕಳೆದುಕೊಂಡಿರುವ ಸಿಮ್ ಕಾರ್ಡ್ ಅನ್ನು ಸಂಬಂಧಪಟ್ಟ ಸರ್ವಿಸ್ ಪ್ರೊವೈಡರ್ ನಿಂದ ಮತ್ತೆ ಪಡೆದುಕೊಂಡು, ಒಟಿಪಿ ಪಡೆಯಲು ಸದರಿ ಸಿಮ್‌ ಕಾರ್ಡನ್ನು ಚಾಲನೆಯಲ್ಲಿ ಇಟ್ಟುಕೊಳ್ಳುವುದು. CEIR PORTAL ನಲ್ಲಿ ಒಟಿಪಿ ಪಡೆಯಲು ಇದು ಅನುಕೂಲವಾಗುತ್ತದೆ.

➡️ www.ceir.gov.in ವೆಬ್ ಸೈಟ್‌ಗೆ ಹೋಗಿ ತಮ್ಮ ಕಳುವಾದ/ಕಾಣೆಯಾದ/ಸುಲಿಗೆಯಾದ Mobile Phone ಗಳ ಮಾಹಿತಿಯನ್ನು ನಮೂದಿಸಬೇಕು. ಸದರಿ ಮಾಹಿತಿ ನಮೂದಿಸಿದ 24 ಗಂಟೆಗಳಲ್ಲಿ ತಮ್ಮ Mobile Phone ಬ್ಲಾಕ್ ಆಗುತ್ತದೆ. ನಂತರ ಯಾರೂ ಕೂಡಾ ಆ Mobile ಅನ್ನು ದುರ್ಬಳಕೆ ಮಾಡಲು ಸಾಧ್ಯವಿರುವುದಿಲ್ಲ.

➡️ ಕಳುವಾದ/ಕಾಣೆಯಾದ ಸುಲಿಗೆಯಾದ Mobile Phone ಪತ್ತೆಯಾದರೆ ಈಗಾಗಲೇ ತಿಳಿಸಿರುವ CEIR PORTAL ನಲ್ಲಿ ಲಾಗಿನ್ ಆಗಿ Unblock ಮಾಡಿ ಉಪಯೋಗಿಸಬಹುದು.

➡️ ಹಾಗೆಯೇ ಸಾರ್ವಜನಿಕರು ಪೊಲೀಸ್ ಠಾಣೆಯನ್ನು ಸಂಪರ್ಕಿಸಿದರೆ EIR PORTAL ಮೂಲಕ ಕಳುವಾದ/ಕಾಣೆಯಾದ Mobile Phone ಅನ್ನು Block ಮಾಡಲಾಗುವುದು ಹಾಗೂ ಸದರಿ Mobile Phone ಪತ್ತೆಯಾದಲ್ಲಿ Unblock ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago