Featured

ಮಂಗಳೂರು : ಕಳ್ಳತನ ಅಥವಾ ಕಳೆದುಕೊಂಡ ಫೋನ್‌ ಬ್ಲಾಕ್‌ ಮಾಡಲು ಹೊಸ ವಿಧಾನ ಜಾರಿ : ದ.ಕ.ಎಸ್ಪಿ – Vishwanews24

ಕಳ್ಳತನ ಅಥವಾ ಕಳೆದುಕೊಂಡ ಫೋನ್‌ ಬ್ಲಾಕ್‌ ಮಾಡಲು ಹೊಸ ವಿಧಾನ ಜಾರಿ : ದ.ಕ.ಎಸ್ಪಿ

ಮಂಗಳೂರು : ಕಳುವಾದ ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ ಗಳನ್ನು ಬ್ಲಾಕ್ ಮಾಡುವ ಹೊಸ ವಿಧಾನವನ್ನು ಪೋಲಿಸ್ ಇಲಾಖೆ ಜಾರಿಗೊಳಿಸಿದ್ದು, ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಮಾತೆ ವಿಕ್ರಮ್ ಪ್ರಕಟಣೆ ಹೊರಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಕಳುವಾದ/ಕಾಣೆಯಾದ/ಸುಲಿಗೆಯಾದ Mobile Phone ಗಳು ಸೈಬರ್ ಅಪರಾಧ ನಾರ್ಕೋಟಿಕ್ಸ್ ಅಪರಾಧ ಸರಿದಂತೆ ಇತರ ಗಂಭೀರ ಅಪರಾಧಗಳಲ್ಲಿ ಬಳಕೆಯಾಗುತ್ತಿರುವುದು ಗಣನೀಯವಾಗಿ ಕಂಡುಬಂದಿರುತ್ತದೆ. ಇಂತಹ Mobile Phone ಗಳ ದುರ್ಬಳಕೆಯನ್ನು ತಡೆಗಟ್ಟಲು ಕೇಂದ್ರ ಟೆಲಿಕಮ್ಯುನಿಕೇಶನ್ ಇಲಾಖೆಯಿಂದ ಕಳುವಾದ/ಕಾಣಿಯಾದ/ಸುಲಿಗೆಯಾದ Mobile Phone ಗಳನ್ನು ಬ್ಲಾಕ್ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿರುತ್ತದೆ ಹಾಗೂ ಪೊಲೀಸ್ ಇಲಾಖೆಯಿಂದ ಕೂಡಾ ಈ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದೆ.

ಈ ಕೆಳಕಂಡ ವಿಧಾನಗಳನ್ನು ಅನುಸರಿಸುವುದರ ಮೂಲಕ ಕಳುವಾದ ಕಾಣೆಯಾದ ಸುಲಿಗೆಯಾದ Mobile Phone ಗಳನ್ನು ಬ್ಲಾಕ್ ಮಾಡಬಹುದಾಗಿದೆ.

➡️ ನಿಮ್ಮ Mobile Phone ಕಳುವು ಕಾಣೆಯಾದರೆ/ಸುಲಿಗೆಯಾದರೆ ತಾವು ತಕ್ಷಣವೇ KSP E-Lost ಅಪ್ಲಿಕೇಶನ್ ನಲ್ಲಿ ದೂರನ್ನು ಸಲ್ಲಿಸಿ Digital E Acknowledgement ಪಡೆದುಕೊಳ್ಳಬೇಕು, ಅಥವಾ ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ದೂರನ್ನು ಸಲ್ಲಿಸಿ ಸ್ವೀಕೃತಿಯನ್ನು ಪಡೆದುಕೊಳ್ಳುವುದು, ಸ್ವೀಕೃತಿಯ ಪ್ರತಿಯನ್ನು ತಮ್ಮ ಬಳಿ ಇಟ್ಟುಕೊಂಡಿರಬೇಕು.]

➡️ ನೀವು ಕಳೆದುಕೊಂಡಿರುವ ಸಿಮ್ ಕಾರ್ಡ್ ಅನ್ನು ಸಂಬಂಧಪಟ್ಟ ಸರ್ವಿಸ್ ಪ್ರೊವೈಡರ್ ನಿಂದ ಮತ್ತೆ ಪಡೆದುಕೊಂಡು, ಒಟಿಪಿ ಪಡೆಯಲು ಸದರಿ ಸಿಮ್‌ ಕಾರ್ಡನ್ನು ಚಾಲನೆಯಲ್ಲಿ ಇಟ್ಟುಕೊಳ್ಳುವುದು. CEIR PORTAL ನಲ್ಲಿ ಒಟಿಪಿ ಪಡೆಯಲು ಇದು ಅನುಕೂಲವಾಗುತ್ತದೆ.

➡️ www.ceir.gov.in ವೆಬ್ ಸೈಟ್‌ಗೆ ಹೋಗಿ ತಮ್ಮ ಕಳುವಾದ/ಕಾಣೆಯಾದ/ಸುಲಿಗೆಯಾದ Mobile Phone ಗಳ ಮಾಹಿತಿಯನ್ನು ನಮೂದಿಸಬೇಕು. ಸದರಿ ಮಾಹಿತಿ ನಮೂದಿಸಿದ 24 ಗಂಟೆಗಳಲ್ಲಿ ತಮ್ಮ Mobile Phone ಬ್ಲಾಕ್ ಆಗುತ್ತದೆ. ನಂತರ ಯಾರೂ ಕೂಡಾ ಆ Mobile ಅನ್ನು ದುರ್ಬಳಕೆ ಮಾಡಲು ಸಾಧ್ಯವಿರುವುದಿಲ್ಲ.

➡️ ಕಳುವಾದ/ಕಾಣೆಯಾದ ಸುಲಿಗೆಯಾದ Mobile Phone ಪತ್ತೆಯಾದರೆ ಈಗಾಗಲೇ ತಿಳಿಸಿರುವ CEIR PORTAL ನಲ್ಲಿ ಲಾಗಿನ್ ಆಗಿ Unblock ಮಾಡಿ ಉಪಯೋಗಿಸಬಹುದು.

➡️ ಹಾಗೆಯೇ ಸಾರ್ವಜನಿಕರು ಪೊಲೀಸ್ ಠಾಣೆಯನ್ನು ಸಂಪರ್ಕಿಸಿದರೆ EIR PORTAL ಮೂಲಕ ಕಳುವಾದ/ಕಾಣೆಯಾದ Mobile Phone ಅನ್ನು Block ಮಾಡಲಾಗುವುದು ಹಾಗೂ ಸದರಿ Mobile Phone ಪತ್ತೆಯಾದಲ್ಲಿ Unblock ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago