Featured

ಮಂಗಳೂರು: ಕಾಂಗ್ರೆಸ್‌ಗೆ ಬರೋರಿದ್ರೆ ಅರ್ಜಿ ಸಲ್ಲಿಸಲಿ : ಡಿಕೆಶಿ -Vishwanews24

ಮಂಗಳೂರು: ಕಾಂಗ್ರೆಸ್‌ಗೆ ಬರೋರಿದ್ರೆ ಅರ್ಜಿ ಸಲ್ಲಿಸಲಿ : ಡಿಕೆಶಿ -Vishwanews24

ಮಂಗಳೂರು : “ಕಾಂಗ್ರೆಸ್‌ಗೆ ಬರೋರಿದ್ರೆ ಅರ್ಜಿ ಸಲ್ಲಿಸಲಿ. ಆ ಮೇಲೆ ಕೂತು ಮಾತನಾಡೋಣ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಉತ್ತಮ ಸರ್ಕಾರ ಕೊಡಲು ಆಗದ ಕಾರಣ ಸಿಎಂ ಬದಲಾವಣೆ ಆಗುತ್ತಿದೆ. ಎರಡು ವರ್ಷದಲ್ಲಿ ಡಬಲ್‌ ಎಂಜಿನ್‌ ಸರ್ಕಾರ ಇಟ್ಟುಕೊಂಡು ಒಳ್ಳೆ ಆಡಳಿತ ಕೊಡಲು ಆಗಿಲ್ಲ. ಆಡಳಿತ ಸರಿ ಇಲ್ಲ” ಎಂದಿದ್ದಾರೆ.

“ನಾನು ಬಹಳ ಹಿಂದೆ 26ಕ್ಕೆ ಮಾತನಾಡುವ ಎಂದಿದ್ದೆ. ರಾಜ್ಯದಲ್ಲಿ ಒಳ್ಳೆ ಸರ್ಕಾರ ಕೊಡೊಕೆ ಆಗಿಲ್ಲ. ಹಾಗಾಗಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಡಬಲ್‌ ಇಂಜಿನ್‌ ಸರ್ಕಾರ ಇದ್ದರೂ ಒಳ್ಳೆ ಆಡಳಿತ ಕೊಡಲು ಆಗಿಲ್ಲ. ಈ ಸರ್ಕಾರಕ್ಕೆ ಗೌರ ಎಲ್ಲಿದೆ. ಅವರಲ್ಲಿ ಎಷ್ಟೇ ಮುಖ್ಯಮಂತ್ರಿ ಬದಲಾವಣೆ ಆದರೂ ಕೂಡಾ ಪಕ್ಷದ ಬಗ್ಗೆ ಮಾತನಾಡುವುದಿಲ್ಲ. ಆದರೆ, ಆಡಳಿತ ವ್ಯವಸ್ಥೆಯ ಕಥೆ ಏನು? ಯಾವ ಅಧಿಕಾರಿಗಳು ಅವರ ಮಾತುಗಳನ್ನು ಕೇಳುತ್ತಾರೆ” ಎಂದು ಹೇಳಿದ್ದಾರೆ.

“ಅಧಿಕಾರಿಗಳಿಂದ ಹಿಡಿದು ಗ್ರಾ.ಪಂ., ವಿಧಾನಸೌಧದವರೆಗೆ ಯಾರೂ ಅವರ ಮಾತನ್ನು ಕೇಳುತ್ತಿಲ್ಲ. ಈಗ ತುರಾತುರಿಯಲ್ಲಿ ಅನುದಾ ಬಿಡುಗಡೆಯಾಗಿತ್ತಿದೆ. ತುರಾತುರಿಯಲ್ಲಿ ಎಲ್ಲಾ ಫೈಲ್‌ಗಳಿಗೆ ಸಹಿ ಆಗುತ್ತಿದೆ. ಅದರಲ್ಲೂ ನೀರಾವರಿ ಇಲಾಖೆಯ ಎಷ್ಟು ಫೈಲ್‌ ಕ್ಲಿಯರ್‌‌ ಆಗುತ್ತಿದೆ. ಬಜೆಟ್‌ನಲ್ಲಿ ಎಷ್ಟು ಹಣ ಇಟ್ಟಿದ್ರಿ? ಈಗ ಎಷ್ಟು ಕ್ಲಿಯರ್‌ ಆಗುತ್ತಿದೆ? ಎರಡು ವರ್ಷದಿಂದ ಎಷ್ಟು ಕ್ಲಿಯರ್‌ ಆಗಿದೆ? ಈ ಬಗ್ಗೆ ಅಸೆಂಬ್ಲಿಯಲ್ಲಿ ದಾಖಲೆ ಸಮೇತ ನಾನು ಮಾತನಾಡುತ್ತೇನೆ” ಎಂದು ತಿಳಿಸಿದ್ದಾರೆ.

“ಹಣಕಾಸಿ ಇಲಾಖೆ ದುಡ್ಡಿಲ್ಲ ಎಂದು ಪ್ರಾಜೆಕ್ಟ್‌ ಕ್ಲಿಯರ್‌ ಆಗುತ್ತಿರಲಿಲ್ಲ. ಈಗ ಎಲ್ಲಿಂದ ದುಡ್ಡು ಬಂತು? ಇವೆಲ್ಲಾ ಕೂಡಾ ದೊಡ್ಡ ಚರ್ಚೆಯಾಗಬೇಕು. ಈ ಬಗ್ಗೆ ನಾನು ಚರ್ಚೆ ಮಾಡುತ್ತೇನೆ” ಎಂದಿದ್ದಾರೆ.

“ಕಾಂಗ್ರೆಸ್‌ಗೆ ಯಾರಾದರೂ ಬರೋರಿದ್ರೆ ಅರ್ಜಿ ಸಲ್ಲಿಸಲಿ. ಆ ಮೇಲೆ ಕೂತು ಮಾತನಾಡೋಣ. ಈಗ ಇದರ ಬಗ್ಗೆ ಸುಮ್ಮನೆ ಮಾತನಾಡುವುದಿಲ್ಲ. ಕಾಂಗ್ರೆಸ್‌ ಪಾರ್ಟಿಗೆ ಬರಬೇಕು ಎಂದು ಇಷ್ಟ ಇರುವವರು ಬಹಳಷ್ಟು ಮಂದಿ ಇದ್ದಾರೆ. ಅವರ ಹೆಸರು ಹೇಳೊದಕ್ಕೆ ಹೋಗಲ್ಲ. ಹೋದವರು, ಇರುವವರು ಹಾಗೂ ಬರುತ್ತಾರೆ ಅನ್ನೋದಲ್ಲ. ಯಾವುದೇ ಇದ್ದರೂ ಪಕ್ಷದ ಕಾನೂನಿನಡಿ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

21 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

22 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

22 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

24 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

24 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

24 hours ago