ಮಂಗಳೂರು: ದೇಶದಲ್ಲಿ ಕಾಂಗ್ರೆಸ್ ಮುಕ್ತ ಭಾರತ ಗುರಿಯನ್ನು ಬಿಜೆಪಿ ಸಾಧಿಸಿದೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಮಟ್ದಲ್ಲೂ ಕಾಂಗ್ರೆಸ್ ಮುಕ್ತ ಗುರಿಯನ್ನು ನಮ್ಮ ಪಕ್ಷ ಸಾಧಿಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು; ಕಾಂಗ್ರೆಸ್ ಪಕ್ಷವು ಇದೀಗ ದೇಶ ರಾಜಕಾರಣದಲ್ಲಿ ಅಪ್ರಸ್ತುತವಾಗಿದೆ. ನಾಯಕತ್ವದ ಕೊರತೆ, ಜನವಿರೋಧಿ ನೀತಿಗಳು, ರಾಷ್ಟ್ರದ ಹಿತಾಸಕ್ತಿ ಬಗ್ಗೆ ರಾಜಿ.. ಇತ್ಯಾದಿ ಕಾರಣಗಳಿಂದ ಆ ಪಕ್ಷವು ಜನಮಾನಸದಿಂದ ಮರೆಯಾಗಿಬಿಟ್ಟಿದೆ. ಹೀಗಾಗಿ ದೇಶದಲ್ಲಿ ಜನರ ಏಕೈಕ ʼರಾಜಕೀಯ ಆಯ್ಕೆʼ ಎಂದರೆ ಬಿಜೆಪಿ ಮಾತ್ರ ಎಂದರು.
ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಬಿಜೆಪಿಯು ಕಾಂಗ್ರೆಸ್ ವಿರುದ್ಧ ತನ್ನೆಲ್ಲ ಗುರಿಗಳನ್ನು ಸಾಧಿಸಿದೆ. ಇದೀಗ ಪಂಚಾಯಿತಿ ಮಟ್ಟದಲ್ಲೂ ಆ ಪಕ್ಷವನ್ನು ಮೂಲೋತ್ಪಾಟನೆ ಮಾಡುವುದು ನಿಶ್ಚಿತ. ಆ ನಿಟ್ಟಿನಲ್ಲಿ ಪಕ್ಷವು ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಹಾಕಿಕೊಂಡಿದೆ. ಲೋಕಮಾನ್ಯ ತಿಲಕರು ಹೇಳಿದ ಸ್ವರಾಜ್ಯ ಹಾಗೂ ಮಹಾತ್ಮ ಗಾಂಧಿ ಅವರ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಸಾಕಾರ ಮಾಡಲು ಎಪ್ಪತ್ತು ವರ್ಷಗಳ ನಂತರ ಬಿಜೆಪಿ ಬರಬೇಕಾಯಿತು ಎಂದು ಡಿಸಿಎಂ ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…