ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಅದನ್ನು ತಡೆಯುವಲ್ಲಿ ರಾಜ್ಯ ಗೃಹ ಇಲಾಖೆಯ ವೈಫಲ್ಯ ಮತ್ತು ಜಿಲ್ಲೆಯ ಮುಸ್ಲಿಮರ ಕಡೆಗಣನೆಗೆ ಬೇಸತ್ತು ಮಂಗಳೂರಿನ ಬೋಳಾರದಲ್ಲಿರುವ ಶಾದಿ ಮಹಲ್ ಸಭಾಂಗಣದಲ್ಲಿ ಗುರುವಾರ ನಡೆದ ತುರ್ತು ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಗಳಲ್ಲಿರುವ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಪ್ರಕಟಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಸ್ಲಿಂ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಮಾತನಾಡಿ ಸಮುದಾಯಕ್ಕೆ ಆಗಿರುವ ಅನ್ಯಾಯ, ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆ ಯ ಬಗ್ಗೆ ಮಾತನಾಡುತ್ತಿದ್ದಂತೆ ಕಾರ್ಯಕರ್ತರು ವೇದಿಕೆಗೆ ನುಗ್ಗಿ ”ಬೇಕೆ ಬೇಕು ನಮಗೆ ನ್ಯಾಯಬೇಕು” ಎಂದು ಆಗ್ರಹಿಸಿದರು.
ಎಂ ಎಸ್ ಮುಹಮ್ಮದ್, ಮಾಜಿ ಕಾರ್ಪೊರೇಟರ್ ಅಬ್ದುಲ್ ರವೂಫ್, ಸುಹೈಲ್ ಕಂದಕ್ ಜನಸಮೂಹವನ್ನು ಸಮಾಧಾನ ಪಡಿಸಲು ಯತ್ನಿದರು. ಆದರೆ ಕಾರ್ಯಕರ್ತರು ಪಟ್ಟು ಬಿಡಲಿಲ್ಲ. ಕೊನೆಗೆ ನಾಯಕರು ನಮ್ಮ ನಿರ್ಧಾರಕ್ಕೆ ಬದ್ಧ ಎಂದು ಹೇಳಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂಎಸ್ ಮುಹಮ್ಮದ್, ಅಲ್ಪಸಂಖ್ಯಾತ ಅಧ್ಯಕ್ಷ ಸ್ಥಾನಕ್ಕೆ ಶಾಹುಲ್ ಹಮೀದ್ ಸಾಮೂಹಿಕ ರಾಜೀನಾಮೆ ನೀಡಿರುವುದಾಗಿ ಪ್ರಕಟಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…