ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆಗಳು ಮತ್ತು ಅದನ್ನು ತಡೆಯುವಲ್ಲಿ ರಾಜ್ಯ ಗೃಹ ಇಲಾಖೆಯ ವೈಫಲ್ಯ ಮತ್ತು ಜಿಲ್ಲೆಯ ಮುಸ್ಲಿಮರ ಕಡೆಗಣನೆಗೆ ಬೇಸತ್ತು ಮಂಗಳೂರಿನ ಬೋಳಾರದಲ್ಲಿರುವ ಶಾದಿ ಮಹಲ್ ಸಭಾಂಗಣದಲ್ಲಿ ಗುರುವಾರ ನಡೆದ ತುರ್ತು ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಗಳಲ್ಲಿರುವ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಪ್ರಕಟಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಸ್ಲಿಂ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಮಾತನಾಡಿ ಸಮುದಾಯಕ್ಕೆ ಆಗಿರುವ ಅನ್ಯಾಯ, ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳವಣಿಗೆ ಯ ಬಗ್ಗೆ ಮಾತನಾಡುತ್ತಿದ್ದಂತೆ ಕಾರ್ಯಕರ್ತರು ವೇದಿಕೆಗೆ ನುಗ್ಗಿ ”ಬೇಕೆ ಬೇಕು ನಮಗೆ ನ್ಯಾಯಬೇಕು” ಎಂದು ಆಗ್ರಹಿಸಿದರು.
ಎಂ ಎಸ್ ಮುಹಮ್ಮದ್, ಮಾಜಿ ಕಾರ್ಪೊರೇಟರ್ ಅಬ್ದುಲ್ ರವೂಫ್, ಸುಹೈಲ್ ಕಂದಕ್ ಜನಸಮೂಹವನ್ನು ಸಮಾಧಾನ ಪಡಿಸಲು ಯತ್ನಿದರು. ಆದರೆ ಕಾರ್ಯಕರ್ತರು ಪಟ್ಟು ಬಿಡಲಿಲ್ಲ. ಕೊನೆಗೆ ನಾಯಕರು ನಮ್ಮ ನಿರ್ಧಾರಕ್ಕೆ ಬದ್ಧ ಎಂದು ಹೇಳಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂಎಸ್ ಮುಹಮ್ಮದ್, ಅಲ್ಪಸಂಖ್ಯಾತ ಅಧ್ಯಕ್ಷ ಸ್ಥಾನಕ್ಕೆ ಶಾಹುಲ್ ಹಮೀದ್ ಸಾಮೂಹಿಕ ರಾಜೀನಾಮೆ ನೀಡಿರುವುದಾಗಿ ಪ್ರಕಟಿಸಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…