Featured

ಮಂಗಳೂರು : ಕಾಂತಾರ ಚಿತ್ರ ಸಕ್ಸಸ್‌ ಹಿನ್ನೆಲೆ ; ಹರಕೆ ಸಲ್ಲಿಸಿದ ರಿಷಬ್ ಶೆಟ್ಟಿ ಟೀಂ – vishwanews24

ಮಂಗಳೂರು : ಕಾಂತಾರ ಚಿತ್ರ ಸಕ್ಸಸ್‌ ಹಿನ್ನೆಲೆ ; ಹರಕೆ ಸಲ್ಲಿಸಿದ ರಿಷಬ್ ಶೆಟ್ಟಿ ಟೀಂ

ತುಳುನಾಡಿಗೆ ಬಂದು ಹರಕೆ ನೇಮೋತ್ಸವ ಸಲ್ಲಿಸಿದ ಕಾಂತಾರ ಚಿತ್ರತಂಡ

ಕಾಂತಾರ ಚಾಪ್ಟರ್ 1  ಸಿನಿಮಾ ಭರ್ಜರಿ ಯಶಸ್ಸು ಕಂಡಿದೆ. ನೂರಾರು ಕೋಟಿ ಲಾಭ ಗಳಿಸಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಿಟ್ ನೀಡಿದ ಚಿತ್ರದ ಮೂಲ ತುಳುನಾಡಿನ ದೈವಾರಾಧನೆ. ಚಿತ್ರದ ಯಶಸ್ಸಿನ ಹಿನ್ನೆಲೆ ವಾರಾಹಿ ಪಂಜುರ್ಲಿ ದೈವಕ್ಕೆ ಮಂಗಳೂರಿನಲ್ಲಿ ಕಾಂತಾರ ಚಿತ್ರತಂಡದಿಂದ ಹರಕೆಯ ನೇಮೋತ್ಸವ ಸಲ್ಲಿಸಲಾಯಿತು.

ಕಾಂತಾರ ಸಿನಿಮಾ ಕನ್ನಡ ಚಿತ್ರ ರಂಗದ ದೊಡ್ಡ ಮೈಲುಗಲ್ಲು. ರಿಷಬ್ ಶೆಟ್ಟಿಯನ್ನು  ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಚಿತ್ರ. ಕಾಂತಾರ ಎರಡು ಚಾಪ್ಟರ್‌ಗಳ ಕಥಾ ಹಂದರವೇ ತುಳುನಾಡಿನ ದೈವ. ಕಾಂತಾರ ಚಾಪ್ಟರ್‌ 1 ಸಿನಿಮಾ‌ ಭರ್ಜರಿ ಯಶಸ್ಸು ಕಂಡು, ಚಿತ್ರತಂಡ ಗೆದ್ದು ಬಿಗಿದೆ. ನಿರ್ಮಾಪಕರಿಗೆ ನೂರಾರು ಕೋಟಿ ಲಾಭ ತಂದಿದೆ. ಹೀಗಾಗಿ, ಮಂಗಳೂರಿನ ಬಾರೆಬೈಲ್ ಶ್ರೀ ಅರಸು ಧರ್ಮ ಜಾರಂದಾಯ, ಬಂಟ ಹಾಗೂ ವಾರಾಹಿ ದೈಸ್ಥಾನದಲ್ಲಿ ಹರಕೆಯ ನೇಮೋತ್ಸವ ಸಲ್ಲಿಸಲಾಯಿತು.

ಸಿನಿಮಾ ನಿರ್ಮಾಣಕ್ಕೂ ಮೊದಲು ಸಿನಿಮಾ ಯಶಸ್ವಿಗಾಗಿ ಪ್ರಾರ್ಥಿಸಿ ಚಿತ್ರತಂಡದವರು ಹರಕೆ ಹೊತ್ತಿದ್ದರು. ದೈವದ ಆಶೀರ್ವಾದದಿಂದ ಸಿನಿಮಾ ಯಶಸ್ಸು ಕಂಡಿದೆ. ಹೀಗಾಗಿ, ನಟ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಂಸ್ ವತಿಯಿಂದ ಹರಕೆ ನೇಮೋತ್ಸವ ಸಲ್ಲಿಸಿದ್ರು. ದೈವದ ನೇಮೋತ್ಸವದಲ್ಲಿ ರಿಷಬ್ ಪತ್ನಿ ಪ್ರಗತಿ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಂಗದೂರು, ನಿರ್ದೇಶಕ ಸಂತೋಷ್ ಆನಂದ ರಾಮ್ ಸೇರಿದಂತೆ ಚಿತ್ರರಂಗದ ಹಲವು ಮಂದಿ ಭಾಗಿಯಾಗಿದ್ದರು. ದೈವದ ಪ್ರಸಾದ ಸ್ವೀಕರಿಸಿ ದೈವಾನುಗ್ರಹಕ್ಕೆ ಪಾತ್ರರಾದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

24 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

24 hours ago