Featured

ಮಂಗಳೂರು : ಕಾಂತಾರ ಸಿನಿಮಾದಲ್ಲಿ ದಲಿತರ ಮತ್ತು ಮಹಿಳೆಯರ ಅವಹೇಳನ : ಸಿನಿಮಾ ಸ್ಥಗಿತಕ್ಕೆ ಸಮತಾ ಸೈನಿಕ ದಳ ಆಗ್ರಹ – Vishwanews24

ಕಾಂತಾರ’ ಸಿನಿಮಾದಲ್ಲಿ ದಲಿತರ ಮತ್ತು ಮಹಿಳೆಯರ ಅವಹೇಳನ : ಸಿನಿಮಾ ಸ್ಥಗಿತಕ್ಕೆ ಸಮತಾ ಸೈನಿಕ ದಳ ಆಗ್ರಹ

ಮಂಗಳೂರು : ಕಾಂತಾರ ಸಿನಿಮಾದಲ್ಲಿ ದಲಿತರಿಗೆ ಮತ್ತು ಮಹಿಳೆಯರನ್ನು ಅವಹೇಳನ ಮಾಡಲಾಗಿದ್ದು, ಕಾಂತಾರ ಸಿನಿಮಾ ಪ್ರದರ್ಶನವನ್ನು ಸ್ಥಗಿತಗೊಳಿಸಬೇಕು ಎಂದು ಸಮತಾ ಸೈನಿಕ ದಳ ಆಗ್ರಹಿಸಿದೆ.

ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಟನೆಯ ಕಾಂತಾರ ಸಿನಿಮಾದಲ್ಲಿ ದಲಿತರು ಮತ್ತು ಮಹಿಳೆಯರನ್ನು ಅವಹೇಳನ ಮಾಡಲಾಗಿದೆ. ಈ ದೃಶ್ಯಗಳಿಗೆ ಕತ್ತರಿ ಹಾಕುವಲ್ಲಿ ಸೆನ್ಸಾರ್ ಮಂಡಳಿ ಸಂಪೂರ್ಣ ವಿಫಲವಾಗಿದೆ. ಆದ್ದರಿಂದ ಕೂಡಲೇ ಕಾಂತಾರ ಸಿನಿಮಾ ಪ್ರದರ್ಶನ ಸ್ಥಗಿತಗೊಳಿಸಲು ಕ್ರಮ ಕೈಗೊಳಳಬೇಕು ಎಂದು ಸಮತಾ ಸೈನಕ ದಳ ಒತ್ತಾಯಿಸಿದೆ.

ಈ ಬಗ್ಗೆ ಸಮತಾ ಸೈನಿಕದಳದ ರಾಜ್ಯ ಕಾರ್ಯದರ್ಶಿ ಲೋಲಾಕ್ಷ ಮಾತನಾಡಿ, ಕಾಂತಾರ ಸಿನಿಮಾದ ಕೆಲವೊಂದು ಪಾತ್ರಗಳಲ್ಲಿ ದಲಿತ ವಿರೋಧಿ ವಿಚಾರಗಳಿದ್ದು, ಇದು ದೈವಾರಾಧನೆಯಲ್ಲಿ ತೊಡಗಿರುವ ದಲಿತರ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಆರೋಪಿಸಿದ್ದಾರೆ.

ಕಾಂತಾರ ಸಿನಿಮಾದಲ್ಲಿ ದಲಿತರು ಹಣ, ಹೆಂಡ ಕೊಟ್ಟರೆ ಏನು ಬೇಕಾದ್ರೂ ಮಾಡುತ್ತಾರೆ ಎಂಬಂತೆ ಚಿತ್ರಿಸಲಾಗಿದೆ. ದೈವ ನರ್ತಕರೂ ಕೂಡ ನಮ್ಮ ಜೊತೆಗೆ ನೋವು ತೋಡಿಕೊಂಡಿದ್ದಾರೆ. ದಲಿತರಷ್ಟೇ ಅಲ್ಲದೇ ದೈವ ನರ್ತಕರ ಕುಟುಂಬಗಳಿಗೂ ಅವಮಾನ ಮಾಡಲಾಗಿದೆ. ಸೆನ್ಸಾರ್ ಮಂಡಳಿ ಮತ್ತೆ ಕಾಂತಾರ ಸಿನಿಮಾ ಪರಿಶೀಲನೆ ಮಾಡಬೇಕು ಎಂದು ಸಮತಾ ಸೈನಿಕ ದಳ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಲಾಕ್ಷ ಅವರು ಮನವಿ ಮಾಡಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ತಮಿಳು ನಟ ವಿಶಾಲ್ – Vishwanews24

ಎಲ್ಲಾ ಸಮುದಾಯದ ಜನರು ಅನೋನ್ಯರಾಗಿದ್ದಾರೆ. ಆದರೆ ಚಿತ್ರದಲ್ಲಿ ಸಮಾಜದಲ್ಲಿ ಒಡಕನ್ನು ಮಾಡಲಾಗಿದೆ. ನಲಿಕೆ,ಪಂಬಂಧ,ಪರವ ಸಮುದಾಯವನ್ನು ಅವಮಾನ ಮಾಡಲಾಗಿದೆ‌. ದೈವ ನರ್ತಕನ ತಾಯಿಯ ಬಾಯಿಯಲ್ಲಿ ಅಸಂವಿಧಾನಿಕ ಪದವನ್ನು ಬಳಸಲಾಗಿದೆ. ಚಿತ್ರದಲ್ಲಿ ಹುಡುಗರು ಕೆಟ್ಟ ಭಾಷೆಯಲ್ಲಿ ಮಾತನಾಡುತ್ತಾರೆ. ಆದರೆ ನರ್ತಕ ಕುಟುಂಬದಲ್ಲಿ ಆ ರೀತಿಯ ಕೆಟ್ಟ ಶಬ್ಧ ಬಳಕೆ ಮಾಡುವುದಿಲ್ಲ. ಊರಿನ ಯಜಮಾನ ಗಂಡ ಸತ್ತವರಿಗೆ ನಾನೇ ಇದ್ದೇನೆ ಅಂತಾ ಹೇಳೋದು ದುಃಖ ತಂದಿದೆ. ಎಲ್ಲಾ ನರ್ತಕ ಸಮುದಾಯ ಭಲಾಡ್ಯ ಸಮುದಾಯವನ್ನು ನಂಬಿ ಕೊಂಡಿದೆ. ಸೆನ್ಸಾರ್ ಮಂಡಳಿ ಕಾನೂನು ಚೌಕಟ್ಟಿನಲ್ಲಿ ಆ ಚಿತ್ರವನ್ನು ನೋಡಬೇಕಿತ್ತು. ಆ ಚಿತ್ರಕ್ಕೆ ಸೆನ್ಸರ್ ಒಂದು ಕಟ್ ಕೂಡಾ ಮಾಡಿಲ್ಲ ಎನ್ನುವುದನ್ನು ರಿಷಬ್ ಶೆಟ್ಟಿ ಹೇಳಿದ್ದರು. ಕಾನೂನಿನ ಚೌಕಟ್ಟಿನಲ್ಲಿ ಪರಿಶೀಲನೆ ಮಾಡಬೇಕಾದ ಸೆನ್ಸಾರ್ ಮಂಡಳಿ ಪರಿಶೀಲನೆ ಮಾಡಬೇಕು ಅಂತಾ ಜಿಲ್ಲಾಡಳಿತಕ್ಕೆ ದಲಿತ ಸಂಘಟನೆಗಳು ಒತ್ತಾಯ ಮಾಡಿದೆ.

ಚಿತ್ರದಲ್ಲಿ ದಲಿತ ಹುಡುಗರನ್ನು ಕೀಳಾಗಿ ಕಾಣಲಾಗಿದೆ. ಧಣಿ ಬಡ ಹೆಣ್ಣು ಮಗಳ ಮನೆಗೆ ಹೋಗುವಾಗ ಹೀರೋ ಕಾವಲು ಕಾಯುತ್ತೇನೆ. ಅದನ್ನು ವಿಜೃಂಭಣೆ ಮಾಡುವ ನಾವು ಇಂತಹ ಕೀಳು ಮಟ್ಟಕ್ಕೆ ಹೋಗಿದ್ದೇವೆ. ಹೊರದೇಶದಲ್ಲಿ ಇದನ್ನು ಭಾರತದ ಸಂಸ್ಕೃತಿ ಎಂದು ಹೇಳೋದು ದುರಂತವಾಗಿದೆ. ವ್ಯಕ್ತಿಗತವಾಗಿ ರಿಷಬ್ ಶೆಟ್ಟಿ ಒಳ್ಳೆಯವರು, ಆದರೆ ಚಿತ್ರವನ್ನು ಕಾನೂನು ಚೌಕಟ್ಟಿನಲ್ಲಿ ‌ನೋಡಬೇಕಾಗುತ್ತದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಮನವಿ ಮಾಡುತ್ತೇವೆ. ಇದು ಹಿಂಸೆಗೆ ಪ್ರಚೋದನೆ ನೀಡುತ್ತದೆ. ಹೀಗಾಗಿ ಆಕ್ಷೇಪಾರ್ಹ ಸೀನ್‌ಗೆ ಕತ್ತರಿ ಹಾಕಬೇಕು. ಗುಳಿಗ ಕೋಲ ಕಾಂತಾರ ಚಿತ್ರದಲ್ಲಿ ಇರುವ ರೀತಿಯೇ ಬೇಕು ಎನ್ನುವ ಬೇಡಿಕೆಯೂ ಬರುತ್ತಿದೆ. ಆರಾಧಾನಾ ಕ್ರಮವನ್ನು ವಿಕೃತಿಗೊಳಿಸುತ್ತಿದೆ ಎಂದು ದಕ್ಷಿಣ ಕ‌ನ್ನಡ ಜಿಲ್ಲಾ ನಲಿಕೆ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಪದ್ಮನಾಭ ಮೂಡುಬಿದಿರೆ ಬೇಸರ ವ್ಯಕ್ತಪಡಿಸಿದ್ದಾರೆ.

ಬೈಂದೂರು: ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿ ಕೆ ಗೋಪಾಲ ಪೂಜಾರಿ ಅರ್ಜಿ‌ ಸಲ್ಲಿಕೆ – Vishwanews24

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

21 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

21 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

21 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

24 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 day ago