ಮಂಗಳೂರು : ಕಾಟಾಚಾರದ ಭದ್ರತೆ ನನಗೆ ಬೇಕಿಲ್ಲ, ಕಲ್ಪಿಸಿದರೆ ಸರಿಯಾದ ಭದ್ರತೆ ನೀಡಲಿ : ಖಾದರ್ -Vishwanews24

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಏಕೈಕ ಕಾಂಗ್ರೇಸ್ ಶಾಸಕ, ಪ್ರಭಾವಿ ಕಾಂಗ್ರೆಸ್ ಮುಖಂಡ ಯು ಟಿ ಖಾದರ್ ಅವರ ಹತ್ಯೆಗೆ ಮೂಲಭೂತವಾದಿ ಸಂಘಟನೆಯೊಂದು ಸಂಚು ರೂಪಿಸಿರುವ ಆಘಾತಕಾರಿ ಮಾಹಿತಿ ಗುಪ್ತಚರ ಇಲಾಖೆ ಸರಕಾರಕ್ಕೆ ನೀಡಿದೆ. ಈ ಹಿನ್ನಲೆಯಲ್ಲಿ ಖಾದರ್ ಅವರಿಗೆ ಭದ್ರತೆ ನೀಡಲು ಸರಕಾರ ಮುಂದೆ ಬಂದಿದ್ದು, ಆದರೆ ಖಾದರ್ ಭದ್ರತೆ ನಿರಾಕರಿಸಿದ್ದಾರೆ.

ಮೈಸೂರಿನ ಕಾಂಗ್ರೇಸ್ ಶಾಸಕ ತನ್ವೀರ್ ಸೇಠ್ ಅವರ ಹತ್ಯೆಗೆ ಸಂಚು ರೂಪಿಸಿದಂತೆ ಸಂಘಟನೆಯೊಂದು ಖಾದರ್ ಹತ್ಯೆಗೆ ಸ್ಕೆಚ್ ಹಾಕಿದೆ ಎಂದು ಗುಪ್ತಚರ ಇಲಾಖೆ ಸರ್ಕಾರಕ್ಕೆ ತಿಳಿಸಿದೆ.

ಈ ಹಿನ್ನಲೆ ಖಾದರ್ ಅವರಿಗೆ ಭದ್ರತೆ ಹೆಚ್ಚು ಮಾಡಲು ಸರಕಾರ ಸೂಚಿಸಿದೆ. ಆದರೆ ಖಾದರ್ ನನಗೆ ಯಾವುದೇ ಜೀವಭಯ ಇಲ್ಲ ಎಂದು ಹೇಳಿ ಭದ್ರತೆಯನ್ನು ನಿರಾಕರಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಖಾದರ್ ನನಗೆ ಜೀವ ಬೆದರಿಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ವತ: ಗೃಹ ಸಚಿವರು ನನಗೆ ಕರೆ ಮಾಡಿ ಹೇಳಿ ಭದ್ರತೆ ಪಡೆಯುವಂತೆ ಹೇಳಿದ್ದಾರೆ. ಆದರೆ ಓರ್ವ ಪೋಲಿಸ್ ಸಿಬ್ಬಂದಿಯನ್ನು ಭದ್ರತೆ ನೀಡಲು ಸರ್ಕಾರ ಮುಂದಾಗಿದೆ. ಇಂತಹ ಕಾಟಾಚಾರದ ಭದ್ರತೆ ನನಗೆ ಬೇಡ ಅಂತ ನಾನು ಸಿಬ್ಬಂದಿಯನ್ನು ವಾಪಸ್ ಕಳುಹಿಸಿದ್ದೇನೆ ಎಂದು ತಿಳಿಸಿದ್ದಾರೆ.

ಎಸಿಪಿ ಒಬ್ಬರು ಮನೆಗೆ ಬಂದು ಮಾತನಾಡಿದ್ದಾರೆ. ಭದ್ರತೆ ಕೊಟ್ಟರೆ ಸರಿಯಾಗಿ ಕೊಡಬೇಕು. ಒಬ್ಬ ಪೊಲೀಸರ ಭದ್ರತೆ ಕೊಟ್ಟು ಹೆಚ್ಚು ಕಡಿಮೆ ಯಾದರೆ ಯಾರು ಹೊಣೆ? ತನ್ವೀರ್ ಸೇಟ್ ಅವರಿಗೂ ಓರ್ವ ಗನ್ ಮೆನ್ ಕೊಟ್ಟಿದ್ದರು. ಘಟನೆಯಾದ ನಂತರ ಆ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಇದರಲ್ಲಿ ಆತನ ತಪ್ಪು ಏನು? ಓರ್ವ ಪೊಲೀಸ್ ಭದ್ರತೆಗೆ ನಿಯೋಜಿಸಿದರೆ ಆತ 8 ಗಂಟೆ ಕೆಲಸ ಮುಗಿಸಿ ಹೋಗುತ್ತಾನೆ. ಆಮೇಲೆ ಏನು ಮಾಡುವುದು? ನನಗೆ ಬೆದರಿಕೆ ಇದೆ ಎಂದು ಗೃಹ ಸಚಿವರೆ ಹೇಳಿದ್ದಾರೆ. ಆದರೆ ಸೂಕ್ತ ಭದ್ರತೆ ಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನಾನು ಶಾಸಕನಾಗಿ ಯಾವತ್ತು ಗನ್ ಮನ್ ಇಟ್ಟುಕೊಂಡಿಲ್ಲ. ಈಗ ಓರ್ವ ಸಿಬ್ಬಂದಿಯನ್ನು ದಿನದ 8 ಗಂಟೆಯ ಕಾಲ ಜೊತೆಗಿಟ್ಟುಕೊಂಡು ಅವನಿಗೆ ನಾನು ತೊಂದರೆ ನೀಡುವುದಿಲ್ಲ. ಕಾಟಾಚಾರದ ಭದ್ರತೆ ನನಗೆ ಬೇಕಿಲ್ಲ. ಕಲ್ಪಿಸಿದರೆ ಸರಿಯಾದ ಭದ್ರತೆ ನೀಡಲಿ ಎಂದು ಹೇಳಿ ಸರ್ಕಾರದ ವಿರುದ್ಧ ಖಾದರ್ ಹರಿಹಾಯ್ದಿದ್ದಾರೆ.

 

Vishwa News 24

Recent Posts

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್ : ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ! – vishwanews24

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ!…

15 hours ago

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – vishwanews24

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…

15 hours ago

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  – vishwanews24

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…

18 hours ago

ಬೆಂಗಳೂರು: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

18 hours ago

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

3 days ago