ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ನಗರದ ನ್ಯಾಯವಾದಿ ಕೆ. ಎಸ್.ಎನ್. ರಾಜೇಶ್ ಪತ್ತೆಗಾಗಿ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ.
ರಾಜೇಶ್ ಪತ್ತೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.ಆರೋಪಿ ದೇಶ ಬಿಟ್ಟು ಹೋಗದಂತೆಯೂ ಎಚ್ಚರ ವಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿದ್ಯಾರ್ಥಿನಿ ಅ.18 ರಂದು ಪೊಲೀಸರಿಗೆ ದೂರು ನೀಡಿದ್ದುಆರೋಪಿಯನ್ನು ಬಂಧಿಸುವುದು ಪೊಲೀಸರಿಂದ ಇದುವರೆಗೂ ಸಾಧ್ಯವಾಗಿಲ್ಲ.
ಮಂಗಳೂರಿನ ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕರಾಗಿದ್ದ ಕೆ.ಎಸ್.ಎನ್ ರಾಜೇಶ್ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿನಿ ಕಳೆದ ಆ.8 ರಂದು ಕೆ.ಎಸ್.ಎನ್ ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದರು. ಆಗ ರಾಜೇಶ್ ಯುವತಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಒತ್ತಾಯಿಸುತ್ತಿದ್ದರು. ಸೆ.25 ರಂದು ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…