Featured

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ :  ಇಬ್ಬರು ಪೊಲೀಸ್ ಸಿಬ್ಬಂದಿಗಳು ಅಮಾನತು – VIshwanews24

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ :  ಇಬ್ಬರು ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್ – VIshwanews24

ಮಂಗಳೂರು : ಇಂಟರ್ನ್‌ಶಿಪ್‌ ಗೆಂದು ಬರುತ್ತಿದ್ದ ಕಾನೂನು ವಿದ್ಯಾರ್ಥಿನಿಗೆ ವಕೀಲ ಕೆ.ಎಸ್​.ಎನ್​.ರಾಜೇಶ್ ಭಟ್ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯ ಸ್ನೇಹಿತೆಗೆ ಬೆದರಿಕೆ ಹಾಕಿದ್ದಆರೋಪದಡಿ ಪವಿತ್ರಾ ಆಚಾರ್ಯ ಎಂಬುವರನ್ನ ಪೊಲೀಸರು ಬಂಧಿಸಿದ್ದಾರೆ.

ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾದ ಕೆ.ಎಸ್​.ಎನ್​. ರಾಜೇಶ್ ಭಟ್​ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಇಂಟರ್ನ್‌ಶಿಪ್‌ ಗೆಂದು ಬರುತ್ತಿದ್ದ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ ಇತ್ತೀಚಿಗೆ ದೂರು ದಾಖಲಿಸಿದ್ದರು. ಇನ್ನೊಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತೆಯ ಸ್ನೇಹಿತೆಗೆ ಬೆದರಿಕೆ ಹಾಕಿರುವ ಬಗ್ಗೆ ಪವಿತ್ರಾ ಆಚಾರ್ಯ ಎಂಬುವರ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ದೂರು ನೀಡುವ ಮುನ್ನ ಸಂತ್ರಸ್ತೆಗೆ ನ್ಯಾಯ ಕೊಡಿಸುತ್ತೇನೆಂದು ಉರ್ವ ಪೊಲೀಸ್ ಠಾಣೆಗೆ ಕರಿಸಿ ಠಾಣೆಯಲ್ಲಿ ಸಂತ್ರಸ್ತೆ ಜೊತೆ ಸಂಧಾನ ವೇಳೆ ಅಶೋಕನಗರದ ಜಾಗೃತ ಮಹಿಳಾ ವೇದಿಕೆಯ ಪವಿತ್ರಾ ಆಚಾರ್ಯ ಬೆದರಿಸಿ ಸಂತ್ರಸ್ತೆಯ ಸ್ನೇಹಿತೆಯಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ ಎಂಬ ಆರೋಪ ಪವಿತ್ರಾ ಆಚಾರ್ಯ ವಿರುದ್ಧ ಕೇಳಿ ಬಂದಿತ್ತು.ಈ ಹಿನ್ನಲೆಯಲ್ಲಿ ಪವಿತ್ರಾ ಆಚಾರ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನು ಕರ್ತವ್ಯ ಲೋಪದಡಿ ಉರ್ವ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀಕಲಾ ಮತ್ತು ಹೆಡ್ ಕಾನ್ಸ್ಟೇಬಲ್ ಪ್ರಮೋದ್ ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಎನ್‌.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಕಾನೂನು ಬಾಹಿರವಾಗಿ ಸಂತ್ರಸ್ತೆಯಿಂದ ಮುಚ್ಚಳಿಕೆ ಬರೆಸಿಕೊಂಡು ಹೆಬ್ಬೆಟ್ಟು ಸಹಿ ಹಾಕಿಸಿಕೊಳ್ಳಲಾಗಿದೆ ಹೀಗಾಗಿ ಕರ್ತವ್ಯ ಲೋಪವಾಗಿದೆ ಎಂದು ಪಿಎಸ್‌ಐ ಹಾಗೂ , ಹೆಡ್ ಕಾನ್ಸ್ಟೇಬಲ್ ಸಸ್ಪೆಂಡ್ ಮಾಡಲಾಗಿದೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

19 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

21 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

22 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

22 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

22 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

22 hours ago