ಮಂಗಳೂರು : ಇಂಟರ್ನ್ಶಿಪ್ ಗೆಂದು ಬರುತ್ತಿದ್ದ ಕಾನೂನು ವಿದ್ಯಾರ್ಥಿನಿಗೆ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಯ ಸ್ನೇಹಿತೆಗೆ ಬೆದರಿಕೆ ಹಾಕಿದ್ದಆರೋಪದಡಿ ಪವಿತ್ರಾ ಆಚಾರ್ಯ ಎಂಬುವರನ್ನ ಪೊಲೀಸರು ಬಂಧಿಸಿದ್ದಾರೆ.
ಲೋಕಾಯುಕ್ತ ಮತ್ತು ಎಸಿಬಿ ವಿಶೇಷ ವಕೀಲರಾದ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಇಂಟರ್ನ್ಶಿಪ್ ಗೆಂದು ಬರುತ್ತಿದ್ದ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ ಇತ್ತೀಚಿಗೆ ದೂರು ದಾಖಲಿಸಿದ್ದರು. ಇನ್ನೊಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತೆಯ ಸ್ನೇಹಿತೆಗೆ ಬೆದರಿಕೆ ಹಾಕಿರುವ ಬಗ್ಗೆ ಪವಿತ್ರಾ ಆಚಾರ್ಯ ಎಂಬುವರ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದೂರು ನೀಡುವ ಮುನ್ನ ಸಂತ್ರಸ್ತೆಗೆ ನ್ಯಾಯ ಕೊಡಿಸುತ್ತೇನೆಂದು ಉರ್ವ ಪೊಲೀಸ್ ಠಾಣೆಗೆ ಕರಿಸಿ ಠಾಣೆಯಲ್ಲಿ ಸಂತ್ರಸ್ತೆ ಜೊತೆ ಸಂಧಾನ ವೇಳೆ ಅಶೋಕನಗರದ ಜಾಗೃತ ಮಹಿಳಾ ವೇದಿಕೆಯ ಪವಿತ್ರಾ ಆಚಾರ್ಯ ಬೆದರಿಸಿ ಸಂತ್ರಸ್ತೆಯ ಸ್ನೇಹಿತೆಯಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ ಎಂಬ ಆರೋಪ ಪವಿತ್ರಾ ಆಚಾರ್ಯ ವಿರುದ್ಧ ಕೇಳಿ ಬಂದಿತ್ತು.ಈ ಹಿನ್ನಲೆಯಲ್ಲಿ ಪವಿತ್ರಾ ಆಚಾರ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಇನ್ನು ಕರ್ತವ್ಯ ಲೋಪದಡಿ ಉರ್ವ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಕಲಾ ಮತ್ತು ಹೆಡ್ ಕಾನ್ಸ್ಟೇಬಲ್ ಪ್ರಮೋದ್ ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಕಾನೂನು ಬಾಹಿರವಾಗಿ ಸಂತ್ರಸ್ತೆಯಿಂದ ಮುಚ್ಚಳಿಕೆ ಬರೆಸಿಕೊಂಡು ಹೆಬ್ಬೆಟ್ಟು ಸಹಿ ಹಾಕಿಸಿಕೊಳ್ಳಲಾಗಿದೆ ಹೀಗಾಗಿ ಕರ್ತವ್ಯ ಲೋಪವಾಗಿದೆ ಎಂದು ಪಿಎಸ್ಐ ಹಾಗೂ , ಹೆಡ್ ಕಾನ್ಸ್ಟೇಬಲ್ ಸಸ್ಪೆಂಡ್ ಮಾಡಲಾಗಿದೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…