ಮಂಗಳೂರು,: ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ.
ಅಕ್ರಮ ಗೋಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ಹಾಕುವ ಶಾಸಕ ಡಾ. ಭರತ್ ಶೆಟ್ಟಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಖಾದರ್, ಯಾರೂ ಕಾನೂನು ಮೀರಿ ಹೋಗಬಾರದು. ಬಕ್ರೀದ್ ಹಿನ್ನೆಲೆಯಲ್ಲಿ ಕುರ್ಬಾನಿಯಾಗಿ 14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಕಾನೂನಿನಲ್ಲಿ ಅವಕಾಶ ಇದೆ. ಹಾಗಾಗಿ ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು. ಈ ಬಗ್ಗೆ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ ಎಂದರು.
ಪಿಎಸ್ಐ ಹಗರಣದ ಕುರಿತಂತೆ ಸಿಐಡಿಗೆ ಛೀಮಾರಿ ಹಾಕಿ ಅಕ್ರಮದ ತನಿಖೆಗೆ ಹೈಕೋರ್ಟ್ ಆದೇಶ ನೀಡುವುದು ಸರಕಾರದ ವೈಫಲ್ಯವಾಗಿದ್ದು, ನ್ಯಾಯಾಧೀಶರಿಗೆ ವರ್ಗಾವಣೆಯ ಬೆದರಿಕೆ ಹಾಕುವ ಪ್ರಕ್ರಿಯೆ ಗಂಭೀರ ವಿಚಾರ ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಂದ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…