Featured

ಮಂಗಳೂರು : ಕಾನೂನು ಸ್ಪಷ್ಟ, ಕಾರ್ಯಕ್ರಮಗಳಲ್ಲಿ ಡಿಜೆಗೆ ಅವಕಾಶವಿಲ್ಲ : ಸುಧೀರ್ ಕುಮಾರ್ ರೆಡ್ಡಿ – vishwanews24

ಮಂಗಳೂರು : ಕಾನೂನು ಸ್ಪಷ್ಟ, ಕಾರ್ಯಕ್ರಮಗಳಲ್ಲಿ ಡಿಜೆಗೆ ಅವಕಾಶವಿಲ್ಲ : ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು : ಡಿಜೆ ಬಳಕೆಗೆ ಸಂಬಂಧಿಸಿ ಕಾನೂನು ಸ್ಪಷ್ಟವಾಗಿದೆ. ಹಾಗಾಗಿ ಕಾರ್ಯಕ್ರಮಗಳಲ್ಲಿ ಡಿಜೆಗೆ ಅವಕಾಶ ನೀಡಲಾಗದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸೇರುವ ಜನಸಂಖ್ಯೆ, ಸ್ಥಳ ಹಾಗೂ ಕಾರ್ಯಕ್ರಮದ ಅಗತ್ಯಕ್ಕೆ ಅನುಗುಣವಾಗಿ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಬೇಕೆಂಬ ದ.ಕ. ಜಿಲ್ಲಾ ಧ್ವನಿವರ್ಧಕ ಹಾಗೂ ದೀಪಾಲಂಕಾರ ಮಾಲಕರ ಸಂಘದ ಬೇಡಿಕೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ತಮ್ಮ ಬೇಡಿಕೆಯಂತೆ ಧ್ವನಿವರ್ದಕಗಳಿಗೆ ಅವಕಾಶ ನೀಡದಿದ್ದರೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕಗಳನ್ನು ನೀಡುವುದಿಲ್ಲ ಎಂದು ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ಬುಧವಾರ ಸುದ್ದಿಗೋಷ್ಟಿಯ ಮೂಲಕ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ, ಬಹಿಷ್ಕಾರ ಸೇರಿದಂತೆ ಯಾವುದೇ ರೀತಿಯ ನಿರ್ಧಾರಕ್ಕೆ ಅವರು ಮುಕ್ತರಾಗಿರುತ್ತಾರೆ. ಅದು ಅವರ ಪರಿಕರಗಳು ಮತ್ತು ಅವರ ನಿರ್ಧಾರ ಎಂದು ಹೇಳಿದ್ದಾರೆ.

ಸಾರ್ವಜನಿಕರು, ಹಿರಿಯ ನಾಗರಿಕರು, ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಸಂಭ್ರಮಾಚರಣೆಯನ್ನು ನಡೆಸಲು ಪೂರಕ ವ್ಯವಸ್ಥೆಗಳನ್ನು ಮಾಡಲಾಗುವುದು. ಈಗಾಗಲೇ ನಿಯಮಗಳಿವೆ. ಸಮರ್ಥನೀಯ ಕಾರಣಗಳಡಿ ಕೆಲವೊಂದು ನಿಯಮಗಳಿಗೆ ಕೆಲ ವಿನಾಯಿತಿ ನೀಡಬಹುದು. ಆದರೆ ವಿನಾಯಿತಿ ನಿಯಮವಾಗುವುದಿಲ್ಲ ಎಂದು ಸುಧೀರ್ ರೆಡ್ಡಿ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

17 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

17 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

17 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

17 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

18 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

18 hours ago