ಮಂಗಳೂರು : ಡಿಜೆ ಬಳಕೆಗೆ ಸಂಬಂಧಿಸಿ ಕಾನೂನು ಸ್ಪಷ್ಟವಾಗಿದೆ. ಹಾಗಾಗಿ ಕಾರ್ಯಕ್ರಮಗಳಲ್ಲಿ ಡಿಜೆಗೆ ಅವಕಾಶ ನೀಡಲಾಗದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸೇರುವ ಜನಸಂಖ್ಯೆ, ಸ್ಥಳ ಹಾಗೂ ಕಾರ್ಯಕ್ರಮದ ಅಗತ್ಯಕ್ಕೆ ಅನುಗುಣವಾಗಿ ಧ್ವನಿವರ್ಧಕ ಬಳಕೆಗೆ ಅವಕಾಶ ನೀಡಬೇಕೆಂಬ ದ.ಕ. ಜಿಲ್ಲಾ ಧ್ವನಿವರ್ಧಕ ಹಾಗೂ ದೀಪಾಲಂಕಾರ ಮಾಲಕರ ಸಂಘದ ಬೇಡಿಕೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ತಮ್ಮ ಬೇಡಿಕೆಯಂತೆ ಧ್ವನಿವರ್ದಕಗಳಿಗೆ ಅವಕಾಶ ನೀಡದಿದ್ದರೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕಗಳನ್ನು ನೀಡುವುದಿಲ್ಲ ಎಂದು ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ಬುಧವಾರ ಸುದ್ದಿಗೋಷ್ಟಿಯ ಮೂಲಕ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ, ಬಹಿಷ್ಕಾರ ಸೇರಿದಂತೆ ಯಾವುದೇ ರೀತಿಯ ನಿರ್ಧಾರಕ್ಕೆ ಅವರು ಮುಕ್ತರಾಗಿರುತ್ತಾರೆ. ಅದು ಅವರ ಪರಿಕರಗಳು ಮತ್ತು ಅವರ ನಿರ್ಧಾರ ಎಂದು ಹೇಳಿದ್ದಾರೆ.
ಸಾರ್ವಜನಿಕರು, ಹಿರಿಯ ನಾಗರಿಕರು, ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಸಂಭ್ರಮಾಚರಣೆಯನ್ನು ನಡೆಸಲು ಪೂರಕ ವ್ಯವಸ್ಥೆಗಳನ್ನು ಮಾಡಲಾಗುವುದು. ಈಗಾಗಲೇ ನಿಯಮಗಳಿವೆ. ಸಮರ್ಥನೀಯ ಕಾರಣಗಳಡಿ ಕೆಲವೊಂದು ನಿಯಮಗಳಿಗೆ ಕೆಲ ವಿನಾಯಿತಿ ನೀಡಬಹುದು. ಆದರೆ ವಿನಾಯಿತಿ ನಿಯಮವಾಗುವುದಿಲ್ಲ ಎಂದು ಸುಧೀರ್ ರೆಡ್ಡಿ ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…