ಮಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್ ಅವರಿಗೆ ಸ್ಥಾನ ನೀಡಬೇಕೆಂದು ಮಂಗಳೂರಿನ ಮೀನುಗಾರರ ವೇದಿಕೆ ಆಗ್ರಹಿಸಿದೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ.ಕ ಮತ್ತು ಉಡುಪಿ ನಾಡದೋಣಿ ಮೀನುಗಾರರ ಒಕ್ಕೂಟದ ಅಧ್ಯಕ್ಷ ಶರತ್ ಗುಡ್ಡೆಕೊಪ್ಲ, ಮೂರು ಬಾರಿ ಶಾಸಕರಾಗಿ ಅನುಭವ ಹೊಂದಿರುವ ಅನುಭವಿ ಲಾಲಾಜಿ ಮೆಂಡನ್ ಅವರಿಗೆ ಅರ್ಹವಾಗಿ ಸಚಿವ ಸ್ಥಾನ ದೊರೆಯಲೇಬೇಕು ಎಂದರು.
ಗಂಗಾಮತ/ಮೊಗವೀರ ಸಮುದಾಯಕ್ಕೆ ಸೇರಿದ 39 ವಿವಿಧ ಮೀನುಗಾರರ ಸಮುದಾಯದ ಕರ್ನಾಟಕದಲ್ಲಿ 80 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಮೊಗವೀರ ಸಮುದಾಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಮೀನುಗಾರರ ಹಲವು ಬೇಡಿಕೆಗಳು ಇನ್ನೂ ಈಡೇರಿಲ್ಲ. ನಮ್ಮ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯಬೇಕಾದರೆ ಲಾಲಾಜಿ ಮೆಂಡನ್ ಅವರು ಸಚಿವರಾಗಬೇಕು. ಈ ಹಿಂದೆಯೂ ಮೆಂಡನ್ ಅವರಿಗೆ ಸ್ಥಾನ ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದ್ದೆವು. ಆದರೆ ದೊರೆತಿರಲಿಲ್ಲ. ಈ ಬಾರಿಯಾದರೂ ಸಚಿವ ಸ್ಥಾನ ನೀಡಬೇಕು ಎಂದವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮೊಗವೀರ ಸಮಾಜದ ಹಿರಿಯ ಮುಖಂಡ ನ್ಯಾಯವಾದಿ, ದಯಾನಾಥ್ ಕೋಟ್ಯಾನ್, ದ.ಕ ಮೊಗವೀರ ಮಹಾಜನ ಸಂಘದ ಮಾಜಿ ಅಧ್ಯಕ್ಷ ನ್ಯಾಯವಾದಿ ಗಂಗಾಧರ ಹೊಸಬೆಟ್ಟು, ಉಪಾಧ್ಯಕ್ಷ ದೇವದಾಸ್ ಬೋಳೂರು, ಮಂಗಳೂರು ಹದಿನಾಲ್ಕು ಪಟ್ನ ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷ ರಾಜೀವ್ ಕಾಂಚನ್ , ಉರ್ವ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿಶ್ಚಂದ್ರ ಕರ್ಕೇರ ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…