ಮಂಗಳೂರು: ಕಾಪು ಶಾಸಕ ಲಾಲಾಜಿ ಮೆಂಡನ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಮೀನುಗಾರರ ವೇದಿಕೆ ಆಗ್ರಹ -Vishwanews24

ಮಂಗಳೂರು: ಕಾಪು ಶಾಸಕ ಲಾಲಾಜಿ ಮೆಂಡನ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಮೀನುಗಾರರ ವೇದಿಕೆ ಆಗ್ರಹ -Vishwanews24

ನಮ್ಮ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯಬೇಕಾದರೆ ಲಾಲಾಜಿ ಮೆಂಡನ್ ಅವರು ಸಚಿವರಾಗಬೇಕು..

ಮಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್ ಅವರಿಗೆ ಸ್ಥಾನ ನೀಡಬೇಕೆಂದು ಮಂಗಳೂರಿನ ಮೀನುಗಾರರ ವೇದಿಕೆ ಆಗ್ರಹಿಸಿದೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದ.ಕ ಮತ್ತು ಉಡುಪಿ ನಾಡದೋಣಿ ಮೀನುಗಾರರ ಒಕ್ಕೂಟದ ಅಧ್ಯಕ್ಷ ಶರತ್ ಗುಡ್ಡೆಕೊಪ್ಲ, ಮೂರು ಬಾರಿ ಶಾಸಕರಾಗಿ ಅನುಭವ ಹೊಂದಿರುವ ಅನುಭವಿ ಲಾಲಾಜಿ ಮೆಂಡನ್ ಅವರಿಗೆ ಅರ್ಹವಾಗಿ ಸಚಿವ ಸ್ಥಾನ ದೊರೆಯಲೇಬೇಕು ಎಂದರು.

ಗಂಗಾಮತ/ಮೊಗವೀರ ಸಮುದಾಯಕ್ಕೆ ಸೇರಿದ 39 ವಿವಿಧ ಮೀನುಗಾರರ ಸಮುದಾಯದ ಕರ್ನಾಟಕದಲ್ಲಿ 80 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಮೊಗವೀರ ಸಮುದಾಯಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸೂಕ್ತ ಪ್ರಾತಿನಿಧ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಮೀನುಗಾರರ ಹಲವು ಬೇಡಿಕೆಗಳು ಇನ್ನೂ ಈಡೇರಿಲ್ಲ. ನಮ್ಮ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯಬೇಕಾದರೆ ಲಾಲಾಜಿ ಮೆಂಡನ್ ಅವರು ಸಚಿವರಾಗಬೇಕು. ಈ ಹಿಂದೆಯೂ ಮೆಂಡನ್ ಅವರಿಗೆ ಸ್ಥಾನ ನೀಡಬೇಕು ಎಂದು ಸರಕಾರವನ್ನು ಆಗ್ರಹಿಸಿದ್ದೆವು. ಆದರೆ ದೊರೆತಿರಲಿಲ್ಲ. ಈ ಬಾರಿಯಾದರೂ ಸಚಿವ ಸ್ಥಾನ ನೀಡಬೇಕು ಎಂದವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮೊಗವೀರ ಸಮಾಜದ ಹಿರಿಯ ಮುಖಂಡ ನ್ಯಾಯವಾದಿ, ದಯಾನಾಥ್ ಕೋಟ್ಯಾನ್, ದ.ಕ ಮೊಗವೀರ ಮಹಾಜನ ಸಂಘದ ಮಾಜಿ ಅಧ್ಯಕ್ಷ ನ್ಯಾಯವಾದಿ ಗಂಗಾಧರ ಹೊಸಬೆಟ್ಟು, ಉಪಾಧ್ಯಕ್ಷ ದೇವದಾಸ್ ಬೋಳೂರು, ಮಂಗಳೂರು ಹದಿನಾಲ್ಕು ಪಟ್ನ ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷ ರಾಜೀವ್ ಕಾಂಚನ್ , ಉರ್ವ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ಹರಿಶ್ಚಂದ್ರ ಕರ್ಕೇರ ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago