ಮಂಗಳೂರು: ಕಾರಣಿಕ ಮೆರೆದ ಕೊರಗಜ್ಜ ; ತನ್ನ ಕ್ಷೇತ್ರ ಮಾಲಿನ್ಯ ಮಾಡಿದ ಓರ್ವನ ಸಾವು ,ಇಬ್ಬರಿಂದ ತಪ್ಪು ಕಾಣಿಕೆ -Vishwanews24
ಮಂಗಳೂರು: ಕಾರಣಿಕ ಮೆರೆದ ಕೊರಗಜ್ಜ ; ತನ್ನ ಕ್ಷೇತ್ರ ಮಾಲಿನ್ಯ ಮಾಡಿದ ಓರ್ವನ ಸಾವು ,ಇಬ್ಬರಿಂದ ತಪ್ಪು ಕಾಣಿಕೆ -Vishwanews24
ನಗರದ ಎಮ್ಮೆಕೆರೆ ಬಬ್ಬುಸ್ವಾಮಿ ಪರಿವಾರ ದೈವಗಳ ಕ್ಷೇತ್ರ ಸೇರಿದಂತೆ ನಗರ ಹಲವು ದೈವಸ್ಥಾನದ ಕಾಣಿಕೆ ಡಬ್ಬಿಗಳಿಗೆ ಅಶ್ಲೀಲ ಸೊತ್ತುಗಳನ್ನು ಹಾಕಿ ಅಪವಿತ್ರಗೊಳಿಸಲಾಗಿತ್ತು. ಕಿಡಿಗೇಡಿಗಳು ಗಲಭೆ ಸೃಷ್ಟಿಸಿ, ಶಾಂತಿ ಕದಡುವ ಉದ್ದೇಶದಿಂಧ ಈ ಕೃತ್ಯವೆಸಗಿದ್ದರು. ಒಂದು ತಿಂಗಳ ಹಿಂದೆ ಕಾಣಿಕೆ ಡಬ್ಬಿ ತೆರೆದು ನೋಡುವಾಗ ಈ ಕೃತ್ಯ ಬಯಲಿಗೆ ಬಂದಿದ್ದು, ಈ ಬಗ್ಗೆ ಹಲವು ದೈವಸ್ಥಾನಗಳ ಆಡಳಿತ ಮಂಡಳಿ ಪೊಲೀಸ್ ಠಾಣೆಗಳಿಗೆ ದೂರು ಕೂಡಾ ನೀಡಿತ್ತು.ಅದರಂತೆ ಪೊಲೀಸರು ತನಿಖೆ ನಡೆಸುತ್ತಿದ್ದರು.
ಉಡುಪಿ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ -Vishwanews24
ಆಘಾತಗೊಂಡ ಭಕ್ತಾದಿಗಳು ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ತಪ್ಪಿತಸ್ಥರಿಗೆ ಸರಿಯಾದ ಶಿಕ್ಷೆಯಾಗಲಿ ಎಂದು ಕೊರಗಜ್ಜನಲ್ಲಿ ಬೇಡಿಕೆ ಇಟ್ಟಿದ್ದರು. ಇದು ಮಾತ್ರವಲ್ಲದೆ ಹಿಂದೂ ಸಂಘಟನೆಗಳು ದೈವಸ್ಥಾಗಳನ್ನು ಅಪವಿತ್ರಗೊಳಿಸುವವರಿಗೆ ದೇವರು ತಕ್ಕ ಶಾಸ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಲ್ಲದೆ, ಪ್ರತಿಭಟನಾರ್ಥವಾಗಿ ಕೊರಗಜ್ಜ ಮೂಲ ಕ್ಷೇತ್ರಕ್ಕೆ ಪಾದಯಾತ್ರೆಯನ್ನು ಮಾಡಿದ್ದರು.

