Featured

ಮಂಗಳೂರು: ಕಾರಣಿಕ ಮೆರೆದ ಕೊರಗಜ್ಜ ; ತನ್ನ ಕ್ಷೇತ್ರ ಮಾಲಿನ್ಯ ಮಾಡಿದ ಓರ್ವನ ಸಾವು ,ಇಬ್ಬರಿಂದ ತಪ್ಪು ಕಾಣಿಕೆ -Vishwanews24

ಮಂಗಳೂರು: ಕಾರಣಿಕ ಮೆರೆದ ಕೊರಗಜ್ಜ ; ತನ್ನ ಕ್ಷೇತ್ರ ಮಾಲಿನ್ಯ ಮಾಡಿದ ಓರ್ವನ ಸಾವು ,ಇಬ್ಬರಿಂದ ತಪ್ಪು ಕಾಣಿಕೆ -Vishwanews24

ಕೊರಗಜ್ಜನ ಕಾಣಿಕೆ ಡಬ್ಬ ಅಪವಿತ್ರಗೈದ ಆರೋಪಿ ಸಾವು..

ಆತಂಕಗೊಂಡ ಇನ್ನುಳಿದ ಆರೋಪಿಗಳಿಂದ ಕ್ಷಮಾಪಣೆ..

ಮಂಗಳೂರು: ನಗರದ ಎಮ್ಮೆಕೆರೆ ಸೇರಿದಂತೆ ಹಲವೆಡೆ ದೈವಸ್ಥಾನಗಳಿಗೆ ತೆರಳಿ ಕ್ಷೇತ್ರವನ್ನು ಅಪವಿತ್ರಗೊಳಿಸಿದ ಆರೋಪಿಗಳ ಪೈಕಿ ಒಬ್ಬಾತ ಮೃತಪಟ್ಟಿದ್ದು, ಉಳಿದ ಇಬ್ಬರು ಆರೋಪಿಗಳು ಕೊರಗಜ್ಜ ಕೋಲೋತ್ಸವದಲ್ಲಿ ಕ್ಷಮಾಪಣೆ ಕೇಳಲು ಬಂದ ಕುತೂಹಲಕಾರಿ ಘಟನೆ ನಗರದ ಎಮ್ಮೆಕೆರೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

ನಗರದ ಎಮ್ಮೆಕೆರೆ ಬಬ್ಬುಸ್ವಾಮಿ ಪರಿವಾರ ದೈವಗಳ ಕ್ಷೇತ್ರ ಸೇರಿದಂತೆ ನಗರ ಹಲವು ದೈವಸ್ಥಾನದ ಕಾಣಿಕೆ ಡಬ್ಬಿಗಳಿಗೆ ಅಶ್ಲೀಲ ಸೊತ್ತುಗಳನ್ನು ಹಾಕಿ ಅಪವಿತ್ರಗೊಳಿಸಲಾಗಿತ್ತು. ಕಿಡಿಗೇಡಿಗಳು ಗಲಭೆ ಸೃಷ್ಟಿಸಿ, ಶಾಂತಿ ಕದಡುವ ಉದ್ದೇಶದಿಂಧ ಈ ಕೃತ್ಯವೆಸಗಿದ್ದರು. ಒಂದು ತಿಂಗಳ ಹಿಂದೆ ಕಾಣಿಕೆ ಡಬ್ಬಿ ತೆರೆದು ನೋಡುವಾಗ ಈ ಕೃತ್ಯ ಬಯಲಿಗೆ ಬಂದಿದ್ದು, ಈ ಬಗ್ಗೆ ಹಲವು ದೈವಸ್ಥಾನಗಳ ಆಡಳಿತ ಮಂಡಳಿ ಪೊಲೀಸ್ ಠಾಣೆಗಳಿಗೆ ದೂರು ಕೂಡಾ ನೀಡಿತ್ತು.ಅದರಂತೆ ಪೊಲೀಸರು ತನಿಖೆ ನಡೆಸುತ್ತಿದ್ದರು.

ಉಡುಪಿ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ -Vishwanews24

ಆಘಾತಗೊಂಡ ಭಕ್ತಾದಿಗಳು ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ತಪ್ಪಿತಸ್ಥರಿಗೆ ಸರಿಯಾದ ಶಿಕ್ಷೆಯಾಗಲಿ ಎಂದು ಕೊರಗಜ್ಜನಲ್ಲಿ ಬೇಡಿಕೆ ಇಟ್ಟಿದ್ದರು. ಇದು ಮಾತ್ರವಲ್ಲದೆ ಹಿಂದೂ ಸಂಘಟನೆಗಳು ದೈವಸ್ಥಾಗಳನ್ನು ಅಪವಿತ್ರಗೊಳಿಸುವವರಿಗೆ ದೇವರು ತಕ್ಕ ಶಾಸ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಲ್ಲದೆ, ಪ್ರತಿಭಟನಾರ್ಥವಾಗಿ ಕೊರಗಜ್ಜ ಮೂಲ ಕ್ಷೇತ್ರಕ್ಕೆ ಪಾದಯಾತ್ರೆಯನ್ನು ಮಾಡಿದ್ದರು.

ನಗರದ ಎಮ್ಮೆಕೆರೆಯಲ್ಲಿರುವ ಕೊರಗಜ್ಜನ ಕ್ಷೇತ್ರವನ್ನು ಮೂತ್ರ ಮಾಡಿ ಗಲೀಜು ಮಾಡಿದ್ದಲ್ಲದ್ದೆ ಲಕ್ಷಾಂತರ ಕೊರಗಜ್ಜನ ಭಕ್ತರಿಗೆ ನೋವುಂಟು ಮಾಡಿದ ಆರೋಪಿಗಳಿಗೆ ಕಾರಣಿಕ ಶಕ್ತಿ ಕೊರಗಜ್ಜನ ಮಹಿಮೆ ಅರಿವಾಗಿದ್ದು ,ಅಪರಾಧಿಗಳಲ್ಲಿ ಓರ್ವ ಹುಚ್ಚು ಹಿಡಿದು ಸಾವನ್ನಪ್ಪಿದ್ದರೆ,ಉಳಿದಿಬ್ಬರು ಪ್ರಾಣ ಭೀತಿಯಿಂದ ಬುಧವಾರ ಕ್ಷೇತ್ರದಲ್ಲಿ ಕೋಲ ನಡೆಯುವ ಸಂದರ್ಭ ಆಗಮಿಸಿ ಕೊರಗಜ್ಜನ ಮುಂದೆ ತಪ್ಪು ಕೇಳಿದ್ದಾರೆ.ಇನ್ನೋರ್ವ ಅಸೌಖ್ಯದಿಂದ ತಪ್ಪು ಕೇಳುವ ಕಾರ್ಯದಿಂದ ದೂರ ಉಳಿದಿದ್ದಾನೆ.
ಕಳೆದ ತಿಂಗಳು ಈ ಘಟನೆ ನಡೆದಿತ್ತು.ಬಳಿಕ ಹಿಂದೂ ಸಂಘಟನೆಗಳು ಕಾಲ್ನಡಿಗೆ ಜಾಥಾ ಸಹಿತ ಹಲವು ಕಾರ್ಯಕ್ರಮ ಹಮ್ಮಿಕೊಂಡು ಕ್ಷೇತ್ರಕ್ಕೆ ಅಪಚಾರ ಮಾಡಿದವರಿಗೆ ತಕ್ಕ ಶಾಸ್ತಿಯಾಗಲಿ ಎಂದು ಹರಕೆ ,ದೂರು ಸಲ್ಲಿದ್ದನ್ನು ಸ್ಮರಿಸಬಹುದು.ಕಾಕತಾಳೀಯ ಎಂಬಂತೆ ಓರ್ವ ಅಪರಾಧಿ ಮೂರ್ನಾಲ್ಕು ದಿನಗಳ ಹಿಂದೆ ಮನೆಯಲ್ಲಿಯೇ ತಲೆಯನ್ನು ಗೋಡೆಗೆ ಬಡಿದುಕೊಂಡು ಮೃತಪಟ್ಟಿದ್ದಾನೆ.ಇದೀಗ ಕ್ಷೇತ್ರದ ಕಾರಣಿಕ ಗೋಚರಿಸಿದ್ದು ಅಪರಾಧಿಗಳು ದೈವದ ಮುಂದೆ ಕ್ಷಮಾಪಣೆಗೆ ಮುಂದಾಗಿದ್ದಾರೆ
ಅಂದಾಜು 25-35ರ ಹರೆಯದ ಯುವಕರೇ ಗಲಬೆ ಸೃಷ್ಟಿಸುವ ಉದ್ದೇಶ ಇಲ್ಲವೇ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ
ಬೇರೆ ಕೋಮಿನ ಒಟ್ಟು ಹದಿಮೂರು ಜನರ ತಂಡ ಕೊರಗಜ್ಜ ಕ್ಷೇತ್ರ ಅಪವಿತ್ರಗೊಳಿಸುವ ಈ ಕೃತ್ಯ ಎಸಗಿರುವುದು ಕಂಡು ಬಂದಿದ್ದು,ಕ್ಷಮಾಪಣೆ ಆದ ಕೂಡಲೇ ಪೊಲೀಸರ ತಂಡ ಆರೋಪಿಗಳನ್ನು ವಶಕ್ಕೆ ಪಡೆದಿದೆ.ಸ್ಥಳದಲ್ಲಿ ಇದ್ದ ಭಜರಂಗದಳದ ಕಾರ್ಯಕರ್ತರು ಆರೋಪಿಗಳ ಮೇಲೆ ಹಲ್ಲೆಗೆ ಮುಂದಾದ ಘಟನೆಯೂ ನಡೆಯಿತು.

ಸಿಡಿ ಪ್ರಕರಣ : ಯುವತಿ ನೀಡಿದ್ದ ಪ್ರಮಾಣೀಕೃತ ಹೇಳಿಕೆಯನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ ಪೋಷಕರು -Vishwanews24

 

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

6 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

7 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

7 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

7 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

10 hours ago