Featured

ಮಂಗಳೂರು: ಕಾರಣಿಕ ಮೆರೆದ ಕೊರಗಜ್ಜ ; ತನ್ನ ಕ್ಷೇತ್ರ ಮಾಲಿನ್ಯ ಮಾಡಿದ ಓರ್ವನ ಸಾವು ,ಇಬ್ಬರಿಂದ ತಪ್ಪು ಕಾಣಿಕೆ -Vishwanews24

ಮಂಗಳೂರು: ಕಾರಣಿಕ ಮೆರೆದ ಕೊರಗಜ್ಜ ; ತನ್ನ ಕ್ಷೇತ್ರ ಮಾಲಿನ್ಯ ಮಾಡಿದ ಓರ್ವನ ಸಾವು ,ಇಬ್ಬರಿಂದ ತಪ್ಪು ಕಾಣಿಕೆ -Vishwanews24

ಕೊರಗಜ್ಜನ ಕಾಣಿಕೆ ಡಬ್ಬ ಅಪವಿತ್ರಗೈದ ಆರೋಪಿ ಸಾವು..

ಆತಂಕಗೊಂಡ ಇನ್ನುಳಿದ ಆರೋಪಿಗಳಿಂದ ಕ್ಷಮಾಪಣೆ..

ಮಂಗಳೂರು: ನಗರದ ಎಮ್ಮೆಕೆರೆ ಸೇರಿದಂತೆ ಹಲವೆಡೆ ದೈವಸ್ಥಾನಗಳಿಗೆ ತೆರಳಿ ಕ್ಷೇತ್ರವನ್ನು ಅಪವಿತ್ರಗೊಳಿಸಿದ ಆರೋಪಿಗಳ ಪೈಕಿ ಒಬ್ಬಾತ ಮೃತಪಟ್ಟಿದ್ದು, ಉಳಿದ ಇಬ್ಬರು ಆರೋಪಿಗಳು ಕೊರಗಜ್ಜ ಕೋಲೋತ್ಸವದಲ್ಲಿ ಕ್ಷಮಾಪಣೆ ಕೇಳಲು ಬಂದ ಕುತೂಹಲಕಾರಿ ಘಟನೆ ನಗರದ ಎಮ್ಮೆಕೆರೆಯಲ್ಲಿ ಬುಧವಾರ ರಾತ್ರಿ ನಡೆದಿದೆ.

ನಗರದ ಎಮ್ಮೆಕೆರೆ ಬಬ್ಬುಸ್ವಾಮಿ ಪರಿವಾರ ದೈವಗಳ ಕ್ಷೇತ್ರ ಸೇರಿದಂತೆ ನಗರ ಹಲವು ದೈವಸ್ಥಾನದ ಕಾಣಿಕೆ ಡಬ್ಬಿಗಳಿಗೆ ಅಶ್ಲೀಲ ಸೊತ್ತುಗಳನ್ನು ಹಾಕಿ ಅಪವಿತ್ರಗೊಳಿಸಲಾಗಿತ್ತು. ಕಿಡಿಗೇಡಿಗಳು ಗಲಭೆ ಸೃಷ್ಟಿಸಿ, ಶಾಂತಿ ಕದಡುವ ಉದ್ದೇಶದಿಂಧ ಈ ಕೃತ್ಯವೆಸಗಿದ್ದರು. ಒಂದು ತಿಂಗಳ ಹಿಂದೆ ಕಾಣಿಕೆ ಡಬ್ಬಿ ತೆರೆದು ನೋಡುವಾಗ ಈ ಕೃತ್ಯ ಬಯಲಿಗೆ ಬಂದಿದ್ದು, ಈ ಬಗ್ಗೆ ಹಲವು ದೈವಸ್ಥಾನಗಳ ಆಡಳಿತ ಮಂಡಳಿ ಪೊಲೀಸ್ ಠಾಣೆಗಳಿಗೆ ದೂರು ಕೂಡಾ ನೀಡಿತ್ತು.ಅದರಂತೆ ಪೊಲೀಸರು ತನಿಖೆ ನಡೆಸುತ್ತಿದ್ದರು.

ಉಡುಪಿ: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚನೆ -Vishwanews24

ಆಘಾತಗೊಂಡ ಭಕ್ತಾದಿಗಳು ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ತಪ್ಪಿತಸ್ಥರಿಗೆ ಸರಿಯಾದ ಶಿಕ್ಷೆಯಾಗಲಿ ಎಂದು ಕೊರಗಜ್ಜನಲ್ಲಿ ಬೇಡಿಕೆ ಇಟ್ಟಿದ್ದರು. ಇದು ಮಾತ್ರವಲ್ಲದೆ ಹಿಂದೂ ಸಂಘಟನೆಗಳು ದೈವಸ್ಥಾಗಳನ್ನು ಅಪವಿತ್ರಗೊಳಿಸುವವರಿಗೆ ದೇವರು ತಕ್ಕ ಶಾಸ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಲ್ಲದೆ, ಪ್ರತಿಭಟನಾರ್ಥವಾಗಿ ಕೊರಗಜ್ಜ ಮೂಲ ಕ್ಷೇತ್ರಕ್ಕೆ ಪಾದಯಾತ್ರೆಯನ್ನು ಮಾಡಿದ್ದರು.

ನಗರದ ಎಮ್ಮೆಕೆರೆಯಲ್ಲಿರುವ ಕೊರಗಜ್ಜನ ಕ್ಷೇತ್ರವನ್ನು ಮೂತ್ರ ಮಾಡಿ ಗಲೀಜು ಮಾಡಿದ್ದಲ್ಲದ್ದೆ ಲಕ್ಷಾಂತರ ಕೊರಗಜ್ಜನ ಭಕ್ತರಿಗೆ ನೋವುಂಟು ಮಾಡಿದ ಆರೋಪಿಗಳಿಗೆ ಕಾರಣಿಕ ಶಕ್ತಿ ಕೊರಗಜ್ಜನ ಮಹಿಮೆ ಅರಿವಾಗಿದ್ದು ,ಅಪರಾಧಿಗಳಲ್ಲಿ ಓರ್ವ ಹುಚ್ಚು ಹಿಡಿದು ಸಾವನ್ನಪ್ಪಿದ್ದರೆ,ಉಳಿದಿಬ್ಬರು ಪ್ರಾಣ ಭೀತಿಯಿಂದ ಬುಧವಾರ ಕ್ಷೇತ್ರದಲ್ಲಿ ಕೋಲ ನಡೆಯುವ ಸಂದರ್ಭ ಆಗಮಿಸಿ ಕೊರಗಜ್ಜನ ಮುಂದೆ ತಪ್ಪು ಕೇಳಿದ್ದಾರೆ.ಇನ್ನೋರ್ವ ಅಸೌಖ್ಯದಿಂದ ತಪ್ಪು ಕೇಳುವ ಕಾರ್ಯದಿಂದ ದೂರ ಉಳಿದಿದ್ದಾನೆ.
ಕಳೆದ ತಿಂಗಳು ಈ ಘಟನೆ ನಡೆದಿತ್ತು.ಬಳಿಕ ಹಿಂದೂ ಸಂಘಟನೆಗಳು ಕಾಲ್ನಡಿಗೆ ಜಾಥಾ ಸಹಿತ ಹಲವು ಕಾರ್ಯಕ್ರಮ ಹಮ್ಮಿಕೊಂಡು ಕ್ಷೇತ್ರಕ್ಕೆ ಅಪಚಾರ ಮಾಡಿದವರಿಗೆ ತಕ್ಕ ಶಾಸ್ತಿಯಾಗಲಿ ಎಂದು ಹರಕೆ ,ದೂರು ಸಲ್ಲಿದ್ದನ್ನು ಸ್ಮರಿಸಬಹುದು.ಕಾಕತಾಳೀಯ ಎಂಬಂತೆ ಓರ್ವ ಅಪರಾಧಿ ಮೂರ್ನಾಲ್ಕು ದಿನಗಳ ಹಿಂದೆ ಮನೆಯಲ್ಲಿಯೇ ತಲೆಯನ್ನು ಗೋಡೆಗೆ ಬಡಿದುಕೊಂಡು ಮೃತಪಟ್ಟಿದ್ದಾನೆ.ಇದೀಗ ಕ್ಷೇತ್ರದ ಕಾರಣಿಕ ಗೋಚರಿಸಿದ್ದು ಅಪರಾಧಿಗಳು ದೈವದ ಮುಂದೆ ಕ್ಷಮಾಪಣೆಗೆ ಮುಂದಾಗಿದ್ದಾರೆ
ಅಂದಾಜು 25-35ರ ಹರೆಯದ ಯುವಕರೇ ಗಲಬೆ ಸೃಷ್ಟಿಸುವ ಉದ್ದೇಶ ಇಲ್ಲವೇ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವ ಉದ್ದೇಶದಿಂದ
ಬೇರೆ ಕೋಮಿನ ಒಟ್ಟು ಹದಿಮೂರು ಜನರ ತಂಡ ಕೊರಗಜ್ಜ ಕ್ಷೇತ್ರ ಅಪವಿತ್ರಗೊಳಿಸುವ ಈ ಕೃತ್ಯ ಎಸಗಿರುವುದು ಕಂಡು ಬಂದಿದ್ದು,ಕ್ಷಮಾಪಣೆ ಆದ ಕೂಡಲೇ ಪೊಲೀಸರ ತಂಡ ಆರೋಪಿಗಳನ್ನು ವಶಕ್ಕೆ ಪಡೆದಿದೆ.ಸ್ಥಳದಲ್ಲಿ ಇದ್ದ ಭಜರಂಗದಳದ ಕಾರ್ಯಕರ್ತರು ಆರೋಪಿಗಳ ಮೇಲೆ ಹಲ್ಲೆಗೆ ಮುಂದಾದ ಘಟನೆಯೂ ನಡೆಯಿತು.

ಸಿಡಿ ಪ್ರಕರಣ : ಯುವತಿ ನೀಡಿದ್ದ ಪ್ರಮಾಣೀಕೃತ ಹೇಳಿಕೆಯನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ ಪೋಷಕರು -Vishwanews24

 

Vishwa News 24

Recent Posts

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

7 hours ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

7 hours ago

Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ – vishwanews24

Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…

8 hours ago

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು – vishwanews24

ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…

8 hours ago

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…

9 hours ago

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು – vishwanews24

ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…

9 hours ago