ಮಂಗಳೂರು : ಕಾರು ಡಿಕ್ಕಿ ; ವಿದ್ಯಾರ್ಥಿಗೆ ಗಂಭೀರ ಗಾಯ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಕಾರು ಡಿಕ್ಕಿ ; ವಿದ್ಯಾರ್ಥಿಗೆ ಗಂಭೀರ ಗಾಯ

ಮಂಗಳೂರು: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನಿಗೆ ತೀವ್ರ ಗಾಯವಾಗಿದ್ದು, ಚಾಲಕ ಪರಾರಿಯಾದ ಘಟನೆ ಹರೇಕಳದಲ್ಲಿ ಬುಧವಾರ ನಡೆದಿದೆ.

ಹರೇಕಳ ಗ್ರಾಮ ಪಂಚಾಯಿತಿ ಬಳಿಯ ನಿವಾಸಿ ಅಬ್ದುಲ್ ಕಲಾಂ ಎಂಬವರ ಪುತ್ರ ಮುಹಮ್ಮದ್ ಶಯಾನ್(8) ಗಾಯಾಳು.

ಮಂಗಳೂರು : ಪೇಜಾವರ ಸ್ವಾಮೀಗಳ ಹೇಳಿಕೆ ಅರ್ಥ ಮಾಡಿಕೊಳ್ಳದೆ ಅವರ ಬಗ್ಗೆ ಸುಳ್ಳು ಹೇಳಿಕೆಗಳು ಖಂಡನೀಯ : ಶರಣ್ ಪಂಪ್ವೆಲ್ – viswhanews24

ಬಾಲಕ ಹರೇಕಳ ಪಾವೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಬುಧವಾರ ಸಂಜೆ ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ಬಾಲಕನಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಸಮಪೂರ್ಣ ದೃಶ್ಯ ಗ್ರಾಮ ಪಂಚಾಯಿತಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯಾವಳಿಗಳ ಆಧಾರದ ಮೇರೆಗೆ ಕಾರನ್ನ ಪತ್ತೆ ಹಚ್ಚಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ಬಗ್ಗೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ : ತಂಬಾಕು ಉತ್ಪನ್ನಗಳು ವಶಕ್ಕೆ – vishwanews24

Leave a Reply