Featured

ಮಂಗಳೂರು : ಕಾರು ಡಿಕ್ಕಿ ; ವಿದ್ಯಾರ್ಥಿಗೆ ಗಂಭೀರ ಗಾಯ – vishwanews24

ಮಂಗಳೂರು : ಕಾರು ಡಿಕ್ಕಿ ; ವಿದ್ಯಾರ್ಥಿಗೆ ಗಂಭೀರ ಗಾಯ

ಮಂಗಳೂರು: ಶಾಲೆಯಿಂದ ಮನೆಗೆ ಬರುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕನಿಗೆ ತೀವ್ರ ಗಾಯವಾಗಿದ್ದು, ಚಾಲಕ ಪರಾರಿಯಾದ ಘಟನೆ ಹರೇಕಳದಲ್ಲಿ ಬುಧವಾರ ನಡೆದಿದೆ.

ಹರೇಕಳ ಗ್ರಾಮ ಪಂಚಾಯಿತಿ ಬಳಿಯ ನಿವಾಸಿ ಅಬ್ದುಲ್ ಕಲಾಂ ಎಂಬವರ ಪುತ್ರ ಮುಹಮ್ಮದ್ ಶಯಾನ್(8) ಗಾಯಾಳು.

ಬಾಲಕ ಹರೇಕಳ ಪಾವೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಬುಧವಾರ ಸಂಜೆ ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ಬಾಲಕನಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಸಮಪೂರ್ಣ ದೃಶ್ಯ ಗ್ರಾಮ ಪಂಚಾಯಿತಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯಾವಳಿಗಳ ಆಧಾರದ ಮೇರೆಗೆ ಕಾರನ್ನ ಪತ್ತೆ ಹಚ್ಚಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ಬಗ್ಗೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ – vishwanews24

ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…

28 minutes ago

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ – vishwanews24

ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…

38 minutes ago

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ – vishwanews24

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…

2 hours ago

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ – vishwanews24

ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್‍ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…

2 hours ago

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ – vishwanews24

ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…

2 hours ago

ಉಡುಪಿ: ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗುವ ಬಿಎಲ್‌ಒಗಳ ವಿರುದ್ಧ ಕ್ರಮ : ಡಿಸಿ ಸ್ವರೂಪ ಟಿ.ಕೆ. ಎಚ್ಚರಿಕೆ – vishwanews24

ಉಡುಪಿ : ಬಿಎಲ್‌ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…

2 hours ago