ಮಂಗಳೂರು – ಕಾರ್ಕಳ ಮಾರ್ಗದಲ್ಲಿ KSRTC ಪ್ರಾಯೋಗಿಕ ಸಂಚಾರ ಆರಂಭ – vishwanews24

Featured, ಉಡುಪಿ

ಮಂಗಳೂರು ಕಾರ್ಕಳ ಮಾರ್ಗದಲ್ಲಿ ಕೆಎಸ್ ಆರ್ ಟಿಸಿ ಬಸ್ ಪ್ರಾಯೋಗಿಕ ಸಂಚಾರ ಆರಂಭ

ಮಂಗಳೂರು: ಮಂಗಳೂರು ಕಾರ್ಕಳ ಮಾರ್ಗದಲ್ಲಿ ಕೆಎಸ್ ಆರ್ ಟಿಸಿ ಬಸ್ ಪ್ರಾಯೋಗಿಕ ಸಂಚಾರ ಗುರುವಾರ(ಡಿ.12) ದಿಂದ ಆರಂಭವಾಗಿದೆ.

ಬೆಳಗ್ಗೆ 6-45 ಕ್ಕೆ ಮೊದಲ ಬಸ್ ಹೊರಟಿದ್ದು, ಎರಡನೇ ಬಸ್ 7-15ಕ್ಕೆ ಮಂಗಳೂರಿನಿಂದ ಹೊರಟಿದೆ. ಇದೇ ವೇಳೆ ಕಾರ್ಕಳದಿಂದಲೂ ಎರಡು ಬಸ್ ಮಂಗಳೂರಿಗೆ ಪ್ರಯಾಣ ಆರಂಭಿಸಿದೆ.

ಬಿಜೈ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ನಂತೂರು, ಗುರುಪುರ, ಕೈಕಂಬ, ಮೂಡುಬಿದಿರೆ ಮೂಲಕ ಕಾರ್ಕಳಕ್ಕೆ ಬಸ್ ಸಂಚರಿಸಲಿದೆ.
ಈ ಬಸ್ ಗಳಿಗೆ ನಾಲ್ಕು ತಿಂಗಳ ತಾತ್ಕಾಲಿಕ‌ ಪರವಾನಗಿ‌ ಲಭಿಸಿದ್ದು, ಮೊದಲ ದಿನವೇ ಬಸ್ ಗಳಿಗೆ ಉತ್ತಮ ಜನ‌ಸ್ಪಂದನೆ ಲಭಿಸಿದೆ.

ಮುರುಡೇಶ್ವರ : ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರ ಸಾವು ಪ್ರಕರಣ ; 7 ಮಂದಿ ಶಿಕ್ಷಕರು ಪೊಲೀಸ್‌ ವಶಕ್ಕೆ – vishwanews24

Leave a Reply