ಕಾರ್ಕಳ: ಮಂಗಳೂರು-ಕಾರ್ಕಳ-ಶೃಂಗೇರಿ ಸಂಪರ್ಕಿಸುವಂತೆ ರೈಲ್ವೆ ಯೋಜನೆ ರೂಪಿತಗೊಳ್ಳುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಡೂರು ಜಂಕ್ಷನ್ನಿಂದ ಶೃಂಗೇರಿವರೆಗೆ ಸರ್ವೆ ಕಾರ್ಯ ನಡೆದಿದೆ. ಕೇಂದ್ರ ಸರ್ಕಾರದಿಂದ ಕಾರ್ಕಳಕ್ಕೆ ಸಿಆರ್ಎಫ್ /ಗ್ರಾಮ ಸಡಕ್ ಯೋಜನೆಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಬಹಳಷ್ಟು ರಾಜ್ಯ ಹೆದ್ದಾರಿಗಳು ರಾಷ್ಟ್ರೀಯ ಹೆದ್ದಾರಿಗಳಾಗಿ ಪರಿವರ್ತನೆಗೊಂಡಿವೆ. ಕಸ್ತೂರಿರಂಗನ್ ವರದಿಯಿಂದ ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಲಾಗುವುದು’ ಎಂದರು.
‘ದೇಶದಲ್ಲಿ ಮತಾಂತರದ ಕುರಿತು ಮೊದಲ ಬಾರಿ ಮತಾಂತರ ನಿಷೇಧ ಕಾಯ್ದೆಗೆ ಒತ್ತು ನೀಡಿದವರು ತಮಿಳುನಾಡಿದ ಅಂದಿನ ಮುಖ್ಯಮಂತ್ರಿ ಜಯಲಲಿತಾ. ಗೋಹತ್ಯೆ ನಿಷೇಧ ಕಾಯ್ದೆ 2008ರಲ್ಲಿ ಜಾರಿಗೆ ತರುವ ಪ್ರಯತ್ನ ಮಾಡಿದ್ದರೂ ಅದು ನನೆಗುದಿಗೆ ಬಿತ್ತು. ಈಗ ಅಂತಿಮ ಹಂತದಲ್ಲಿದೆ. ಅನುಷ್ಠಾನ ರಾಜ್ಯ ಸರ್ಕಾರದಿಂದಲೇ ಆಗಬೇಕು’ ಎಂದರು.
ಶಾಸಕ ವಿ.ಸುನೀಲ್ ಕುಮಾರ್, ಕ್ಷೇತ್ರಾಧ್ಯಕ್ಷ ಮಹಾವೀರ್ ಹೆಗ್ಡೆ, ನಗರಾಧ್ಯಕ್ಷ ಅನಂತಕೃಷ್ಣ ಶೆಣೈ, ಪುರಸಭಾ ಅಧ್ಯಕ್ಷೆ ಸುಮಾ, ಉಪಾಧ್ಯಕ್ಷೆ ಪಲ್ಲವಿ ರಾವ್, ಹರೀಶ್ ಶೆಣೈ, ನವೀನ್ ನಾಯಕ್, ರವೀಂದ್ರಕುಮಾರ್ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…