ಕಾರ್ಕಳ: ಮಂಗಳೂರು-ಕಾರ್ಕಳ-ಶೃಂಗೇರಿ ಸಂಪರ್ಕಿಸುವಂತೆ ರೈಲ್ವೆ ಯೋಜನೆ ರೂಪಿತಗೊಳ್ಳುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಡೂರು ಜಂಕ್ಷನ್ನಿಂದ ಶೃಂಗೇರಿವರೆಗೆ ಸರ್ವೆ ಕಾರ್ಯ ನಡೆದಿದೆ. ಕೇಂದ್ರ ಸರ್ಕಾರದಿಂದ ಕಾರ್ಕಳಕ್ಕೆ ಸಿಆರ್ಎಫ್ /ಗ್ರಾಮ ಸಡಕ್ ಯೋಜನೆಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಬಹಳಷ್ಟು ರಾಜ್ಯ ಹೆದ್ದಾರಿಗಳು ರಾಷ್ಟ್ರೀಯ ಹೆದ್ದಾರಿಗಳಾಗಿ ಪರಿವರ್ತನೆಗೊಂಡಿವೆ. ಕಸ್ತೂರಿರಂಗನ್ ವರದಿಯಿಂದ ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಲಾಗುವುದು’ ಎಂದರು.
‘ದೇಶದಲ್ಲಿ ಮತಾಂತರದ ಕುರಿತು ಮೊದಲ ಬಾರಿ ಮತಾಂತರ ನಿಷೇಧ ಕಾಯ್ದೆಗೆ ಒತ್ತು ನೀಡಿದವರು ತಮಿಳುನಾಡಿದ ಅಂದಿನ ಮುಖ್ಯಮಂತ್ರಿ ಜಯಲಲಿತಾ. ಗೋಹತ್ಯೆ ನಿಷೇಧ ಕಾಯ್ದೆ 2008ರಲ್ಲಿ ಜಾರಿಗೆ ತರುವ ಪ್ರಯತ್ನ ಮಾಡಿದ್ದರೂ ಅದು ನನೆಗುದಿಗೆ ಬಿತ್ತು. ಈಗ ಅಂತಿಮ ಹಂತದಲ್ಲಿದೆ. ಅನುಷ್ಠಾನ ರಾಜ್ಯ ಸರ್ಕಾರದಿಂದಲೇ ಆಗಬೇಕು’ ಎಂದರು.
ಶಾಸಕ ವಿ.ಸುನೀಲ್ ಕುಮಾರ್, ಕ್ಷೇತ್ರಾಧ್ಯಕ್ಷ ಮಹಾವೀರ್ ಹೆಗ್ಡೆ, ನಗರಾಧ್ಯಕ್ಷ ಅನಂತಕೃಷ್ಣ ಶೆಣೈ, ಪುರಸಭಾ ಅಧ್ಯಕ್ಷೆ ಸುಮಾ, ಉಪಾಧ್ಯಕ್ಷೆ ಪಲ್ಲವಿ ರಾವ್, ಹರೀಶ್ ಶೆಣೈ, ನವೀನ್ ನಾಯಕ್, ರವೀಂದ್ರಕುಮಾರ್ ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…