ಕಾರ್ಕಳ: ಮಂಗಳೂರು-ಕಾರ್ಕಳ-ಶೃಂಗೇರಿ ಸಂಪರ್ಕಿಸುವಂತೆ ರೈಲ್ವೆ ಯೋಜನೆ ರೂಪಿತಗೊಳ್ಳುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಡೂರು ಜಂಕ್ಷನ್ನಿಂದ ಶೃಂಗೇರಿವರೆಗೆ ಸರ್ವೆ ಕಾರ್ಯ ನಡೆದಿದೆ. ಕೇಂದ್ರ ಸರ್ಕಾರದಿಂದ ಕಾರ್ಕಳಕ್ಕೆ ಸಿಆರ್ಎಫ್ /ಗ್ರಾಮ ಸಡಕ್ ಯೋಜನೆಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಬಹಳಷ್ಟು ರಾಜ್ಯ ಹೆದ್ದಾರಿಗಳು ರಾಷ್ಟ್ರೀಯ ಹೆದ್ದಾರಿಗಳಾಗಿ ಪರಿವರ್ತನೆಗೊಂಡಿವೆ. ಕಸ್ತೂರಿರಂಗನ್ ವರದಿಯಿಂದ ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಲಾಗುವುದು’ ಎಂದರು.
‘ದೇಶದಲ್ಲಿ ಮತಾಂತರದ ಕುರಿತು ಮೊದಲ ಬಾರಿ ಮತಾಂತರ ನಿಷೇಧ ಕಾಯ್ದೆಗೆ ಒತ್ತು ನೀಡಿದವರು ತಮಿಳುನಾಡಿದ ಅಂದಿನ ಮುಖ್ಯಮಂತ್ರಿ ಜಯಲಲಿತಾ. ಗೋಹತ್ಯೆ ನಿಷೇಧ ಕಾಯ್ದೆ 2008ರಲ್ಲಿ ಜಾರಿಗೆ ತರುವ ಪ್ರಯತ್ನ ಮಾಡಿದ್ದರೂ ಅದು ನನೆಗುದಿಗೆ ಬಿತ್ತು. ಈಗ ಅಂತಿಮ ಹಂತದಲ್ಲಿದೆ. ಅನುಷ್ಠಾನ ರಾಜ್ಯ ಸರ್ಕಾರದಿಂದಲೇ ಆಗಬೇಕು’ ಎಂದರು.
ಶಾಸಕ ವಿ.ಸುನೀಲ್ ಕುಮಾರ್, ಕ್ಷೇತ್ರಾಧ್ಯಕ್ಷ ಮಹಾವೀರ್ ಹೆಗ್ಡೆ, ನಗರಾಧ್ಯಕ್ಷ ಅನಂತಕೃಷ್ಣ ಶೆಣೈ, ಪುರಸಭಾ ಅಧ್ಯಕ್ಷೆ ಸುಮಾ, ಉಪಾಧ್ಯಕ್ಷೆ ಪಲ್ಲವಿ ರಾವ್, ಹರೀಶ್ ಶೆಣೈ, ನವೀನ್ ನಾಯಕ್, ರವೀಂದ್ರಕುಮಾರ್ ಉಪಸ್ಥಿತರಿದ್ದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…