Featured

ಮಂಗಳೂರು: ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ದಿಡೀರ್ ಭೇಟಿ  ಪರಿಶೀಲನೆ  – vishwanews24

ಮಂಗಳೂರು: ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ದಿಡೀರ್ ಭೇಟಿ  ಪರಿಶೀಲನೆ

ಮಂಗಳೂರು: ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರೋಗಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಈ ವೇಳೆ ಆಸ್ಪತ್ರೆ ಯ ಹಿರಿಯ ಅಧಿಕಾರಿಗಳ ಅನುಪ ಸ್ಥಿತಿ ಕಂಡು ಬಂದಿದ್ದು ತಕ್ಷಣವೇ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ ರೋಗಿಗಳ ಸಮಸ್ಯೆಗೆ ಕಾರಣವಾದ ಸರ್ವರ್ ದೋಷವನ್ನು ಸರಿಪಡಿಸಲು ಅಧಿಕಾರಿಗಳು ನೀಡಲಾಗಿರುವ ದೂರುಗಳ ಪತ್ರಗಳನ್ನು ಹಾಜರು ಪಡಿಸುವಂತೆ ತಿಳಿಸಿದರು. ಇದೆ ವೇಳೆ ಕಳೆದ ಹಲವಾರು ದಿನಗಳಿಂದ ಇಲ್ಲಿಗೆ ಬರುವ ರೋಗಿಗಳಿಗೆ ಸರ್ವರ್ ದೋಷವಿದೆ ಎಂದು ಹೇಳಿ, ದೂರದ ಊರುಗಳಿಂದ ಬರುವ ರೋಗಿಗಳು ಸತಾಯಿಸುವ ಬಗ್ಗೆ ಆಕ್ಷೇಪಣೆ ವ್ಯಕ್ತ ಪಡಿಸಿದ ಸಂಸದರು ಸರ್ವರ್ ಸಮಸ್ಯೆ ಇದ್ದರೆ ಇತರ ಆಸ್ಪತ್ರೆಗಳಿಗೆ ನೀಡುವ ಪತ್ರಗಳನ್ನು ಅಂತರ್ಜಾಲದಲ್ಲಿ ಆಗದಿದ್ದರೆ ಕೈ ಬರಹ ಮೂಲಕ ನೀಡಿ ಕೊಡಬೇಕು.ಯಾವುದೇ ಕಾರಣಕ್ಕೂ ರೋಗಿಗಳಿಗೆ ತೊಂದರೆ ನೀಡಬಾರದು ಎಂದು ತಾಕೀತು ಮಾಡಿದರು.

ಈ ವೇಳೆ ಸಂದರ್ಭದಲ್ಲಿ ಮಾತನಾಡಿದ ಓರ್ವ ರೋಗಿಯ ಸಂಭಧಿಕರು ಕಳೆದ ಹಲವಾರು ವರ್ಷಗಳಿಂದ ಡಯಬಿಟಿಸ್ ರೋಗಿಗಳಿಗೆ ಡಯಾಲಿಸಿಸ್ ಮಾಡಲು ಒಂದು ತಿಂಗಳಿಗೆ 12 ಟೋಕನ್ ನೀಡಲಾಗುತ್ತಿತ್ತು. ಆದರೆ ಈಗ 3ತಿಂಗಳಿಗೆ ಟೋಕನ್ ನೀಡಲಾಗುತ್ತಿದ್ದು ಅದು ಸಹ ಈಗ ಸರ್ವರ್ ಸಮಸ್ಯೆಯಿಂದ ಸರಿಯಾದ ಸಮಯಕ್ಕೆ ಸಿಗದೇ ಖಾಸಗಿ ಆಸ್ಪತ್ರೆಯಲ್ಲಿ ನಗದು ಹಣ ನೀಡಿ ಡಯಾಲಿಸಿಸಿ ಮಾಡಿಕೊಳ್ಳುವಂತಾಗಿದೆ.

ಅಲ್ಲದೆ ದೂರದ ಊರಿನಿಂದ ಬೆಳಗ್ಗೆ 8 ಗಂಟೆಗೆ ಬಂದ ನಮಗೆ ಈಗ ಸಂಜೆ 5ರ ತನಕವೂ ಸರ್ವರ್ ಸಮಸ್ಯೆ, ಸರಿ ಆಗಿಲ್ಲ ಎಂದರು ನಮಗೆ ಇಷ್ಟು ದೂರ ನಡೆಯಲು ಸಹ ಸಾಧ್ಯವಿಲ್ಲ. ಅಲ್ಲದೆ ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದರೆ ಮಾತ್ರ ಟೋಕನ್ ನೀಡಲಾಗುವುದು ಎನ್ನುವ ನಿಯಮ ಬೇರೆ ಜಾರಿ ಮಾಡಿದ್ದಾರೆ ಎಂದರು. ಇದೆ ವೇಳೆ ಭೇಟಿ ನೀಡಿದ್ದ ಮಾನ್ಯ ಸಂಸದರು ಇಂದು ಇಎಸ್ಐ ಆಸ್ಪತ್ರೆಗೆ ಭೇಟಿ ನೀಡಿದ್ದ ರೋಗಿಗಳ ಸಮಸ್ಯೆಯನ್ನು ತಿಳಿದುಕೊಂಡು ಅವರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಇಂದು ರೋಗಿಗಳಿಗೆ ಅವಶ್ಯ ವಾಗಿರುವ ಸೂಕ್ತ ದಾಖಲೆ ಗಳನ್ನು ಸ್ಥಳದಲ್ಲೇ ದೊರಕಿಸಿ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಸಮಸ್ಯೆ ಸರಿ ಪಡಿಸುವ ಭರವಸೆಯನ್ನು ನೀಡಿದ್ದಾರೆ ಎಂದು ಸ್ಥಳದಲ್ಲಿದ್ದ ರೋಗಿಗಳು ಸಂತಸ ವ್ಯಕ್ತಪಡಿಸಿದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

12 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago