ಮಂಗಳೂರು: ಕಾಲೇಜಿನ ವಿದ್ಯಾರ್ಥಿಗಳ ನಡುವೆ ಗಲಾಟೆ : 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಕಾಲೇಜಿನ ವಿದ್ಯಾರ್ಥಿಗಳ ನಡುವೆ ಗಲಾಟೆ : 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ದಕ್ಷಿಣಕನ್ನಡ : ಸುರತ್ಕಲ್ ನಲ್ಲಿ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, 10 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ

ಮುಕ್ಕ ಕಾಲೇಜಿನ ವಿದ್ಯಾರ್ಥಿಗಳು ತಡರಾತ್ರಿವರೆಗೂ ಜಗಳವಾಡಿಕೊಂಡು ಗದ್ದಲ ಮಾಡುತ್ತಿದ್ದು, ದಿನಕ್ಕೊಬ್ಬರ ಬರ್ತ್ ಡೇ ಸೇರಿದಂತೆ ವಿವಿಧ ಕಾರಣಗಳನ್ನು ಹೇಳಿಕೊಂಡು ರಸ್ತೆಯ ಮಧ್ಯೆ ಪಟಾಕಿ ಹೊಡೆಯುವುದು ಸೇರಿದಂತೆ ವಿವಿಧ ರೀತಿಯಲ್ಲಿ ಸ್ಥಳೀಯರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ದೂರ ನೀಡಲಾಗಿದೆ.

ಉಡುಪಿ: ಕ್ರೈಸ್ತ ಪ್ರಾರ್ಥನಾ ಕೇಂದ್ರಕ್ಕೆ ಅಕ್ರಮ ದಾಳಿ ಪ್ರಕರಣ: ವಿ.ಹಿಂ.ಪ. ಬಜರಂಗದಳದ ಎಲ್ಲಾ ಕಾರ್ಯಕರ್ತರು ದೋಷ ಮುಕ್ತ – Vishwanews24

ಯುವಕರು ಮುಕ್ಕ ಪರಿಸರದ ಮನೆಯೊಂದರಲ್ಲಿ ವಾಸವಾಗಿದ್ದು, ಹೊಡೆದಾಡಿ ಕೊಂಡಿದ್ದರು ಎನ್ನಲಾಗಿದೆ. ಹಲ್ಲೆಗೊಳಗಾದ ಓರ್ವ ದೂರು ನೀಡಿರುವ ಪರಿಣಾಮ ಆತನೊಂದಿಗೆ ವಾಸವಾಗಿದ್ದ ಎಲ್ಲರನ್ನೂ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂರ ತಿಳಿದು ಬಂದಿದೆ.

ವಿದ್ಯಾರ್ಥಿಗಳೆಲ್ಲರೂ ಕೇರಳ ಮೂಲದವರೆಂದು ತಿಳಿದು ಬಂದಿದೆ. ಈ 10 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಂಡೌಸ್ ಚಂಡಮಾರುತ : ತಮಿಳುನಾಡು, ಆಂಧ್ರಕ್ಕೆ ಭಾರೀ ಮಳೆ ಎಚ್ಚರಿಕೆ – Vishwanews24

Leave a Reply