ಮಂಗಳೂರು: ಮೆಡಿಕಲ್ ಕಾಲೀಜಿನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ಉನ್ನತ ಮಟ್ಟದ ತನಿಖೆ ನಡೆಸುವಂತೆ ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ.
ಕಳೆದ ದಿನ ಮೇ 8 ರಂದು ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇರಿಸಿ, ಮಹಿಳೆಯರ ಖಾಸಗಿ ವಿಡಿಯೋ ಚಿತ್ರೀಕರಣ ನಡೆಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿಯ ಮಾಹಿತಿಯ ಮೇರೆಗೆ ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಅತ್ಯಂತ ಗಂಭೀರವಾಗಿದೆ. ಈ ಕೃತ್ಯ ನಡೆಸಿದ ಬಾಲಕ ಇಂತಹ ಮಾನಸಿಕತೆ ಹೊಂದಿರಲು ಇವನು ಯಾವುದೇ ಜಿಹಾದಿ ಸಂಘಟನೆಗೆ ಸೇರಿಸುವ ಸಂಶಯ ಬಲವಾಗಿದ್ದು, ಅಲ್ಲದೆ ವ್ಯವಸ್ಥಿತ ತಂಡ ಬಾಲಕನನ್ನು ಇಂತಹ ಕೃತ್ಯ ನಡೆಸಲು ಪ್ರೇರೇಪಿಸುವ ಸಾಧ್ಯತೆ ಇದೆ.
ಉಡುಪಿಯಲ್ಲಿ ಇಂತಹ ಘಟನೆ ನಡೆದಿದ್ದು ಆ ಘಟನೆಯ ಹಿಂದೆ ಜಿಹಾದಿ ಸಂಘಟನೆಯ ಕೈವಾಡವಿತ್ತು. ಹಾಗಾಗಿ ಈ ಪ್ರಕರಣವನ್ನು ಉನ್ನತ ಮಟ್ಟದ ತನಿಖೆ ನಡೆಸಬೇಕು ಅಲ್ಲದೆ ಈ ಕೃತ್ಯ ನಡೆಸಿರುವವನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾಧ್ಯಕ್ಷರಾದ ಎಚ್ ಕೆ ಪುರುಷೋತ್ತಮ ಮತ್ತು ಜಿಲ್ಲಾ ಕಾರ್ಯದರ್ಶಿ ರವಿ ಅಸೈಗೋಳಿ ಆಗ್ರಹಿಸಿದ್ದಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…