ಮಂಗಳೂರು: ಕಿಲ್ಪಾಡಿಯ ಕೊರ್ದಬ್ಬು ದೈವಸ್ಥಾನ ಕಳ್ಳತನ ಪ್ರಕರಣ- ಮತ್ತಿಬ್ಬರು ಆರೋಪಿಗಳ ಬಂಧನ – vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಕಿಲ್ಪಾಡಿಯ ಕೊರ್ದಬ್ಬು ದೈವಸ್ಥಾನ ಕಳ್ಳತನ ಪ್ರಕರಣ- ಮತ್ತಿಬ್ಬರು ಆರೋಪಿಗಳ ಬಂಧನ

ಮಂಗಳೂರು: ಕಿಲ್ಪಾಡಿಯಲ್ಲಿರುವ ಶ್ರೀ ಕೋರ್ದಬ್ಬು ದೈವಸ್ಥಾನದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಲ್ಕಿ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ದಾವಣಗೆರೆ ನಿವಾಸಿಗಳಾದ ಅಬ್ದುಲ್ ಜುಮಾಲ್ (24) ಮತ್ತು ಮೊಹಮ್ಮದ್ ಅಫ್ರಿದ್ (24) ಎಂದು ಗುರುತಿಸಲಾಗಿದೆ.

ಸಚಿವ ಸತೀಶ್‌ ಜಾರಕಿಹೊಳಿ ನಿವಾಸಗಳ ಮೇಲೆ ಇ.ಡಿ ದಾಳಿ – vishwanews24

ಅವರ ಬಂಧನದೊಂದಿಗೆ, ಪ್ರಕರಣದಲ್ಲಿ ಬಂಧಿತರಾದ ಒಟ್ಟು ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿದೆ. ಈ ಹಿಂದೆ ಪಡುಬಿದ್ರಿಯ ಕಂಚಿನಡ್ಕ ನಿವಾಸಿ ಜಾಹಿದ್ ಸಿನಾನ್ (26) ಮತ್ತು ಪ್ರಸ್ತುತ ಕಾರ್ನಾಡ್ ಬಳಿ ನೆಲೆಸಿರುವ ಕಾರ್ಕಳದ ನಿಟ್ಟೆ ಮೂಲದ ಯಾಸಿನ್ (36) ಅವರನ್ನು ಪೊಲೀಸರು ಬಂಧಿಸಿದ್ದರು.

ಪ್ರಕರಣದಲ್ಲಿ ಭಾಗಿಯಾದ ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಪಿಓಪಿ ಗಣೇಶ ಮಾರಾಟ, ತಯಾರಿಕೆ ಕಂಡುಬಂದಲ್ಲಿ ಕ್ರಿಮಿನಲ್ ಕೇಸ್ – vishwanews24

Leave a Reply