ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ, ಯಾರನ್ನೂ ರಕ್ಷಿಸಲ್ಲ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೂ, ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪಕ್ರರಣಕ್ಕೂ ಸಾಮ್ಯತೆ ಇದೆ. ಈ ಬಗ್ಗೆ ನಮ್ಮ ಪೊಲೀಸರು ಮಾಹಿತಿ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಆರೋಪಿ ಬಸ್ನಲ್ಲಿ ಬಂದು ಹೋಗಿರುವ ದೃಶ್ಯಗಳು ಪತ್ತೆಯಾಗಿವೆ. ಆರೋಪಿ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಎಲ್ಲ ಆಯಾಮಗಳಲ್ಲೂ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಪ್ರಕರಣದ ತನಿಖೆಗೆ ಪೊಲೀಸರು 7-8 ತಂಡ ರಚನೆ ಮಾಡಿದ್ದಾರೆ. ಪ್ರಕರಣದ ತನಿಖೆಗೆ ಪೊಲೀಸರಿಗೆ ಮುಕ್ತ ಅವಕಾಶಕೊಟ್ಟಿದ್ದೇವೆ ಎಂದರು.
ಬೆಂಗಳೂರಿನ ಜನರು ಯಾವುದೆ ಆತಂಕಪಡುವ ಅಗತ್ಯವಿಲ್ಲ. ಬ್ರ್ಯಾಂಡ್ ಬೆಂಗಳೂರು ಹೆಸರು ಹಾಳು ಮಾಡುವ ಪ್ರಯತ್ನ ನಡೆದಿದೆ. ಬೆಂಗಳೂರನ್ನು ಹಾಳು ಮಾಡುವ ಎಲ್ಲ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರು ಏನೇ ರಾಜಕೀಯ ಮಾಡಿಕೊಳ್ಳಲಿ, ಅದರ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ನಮಗೆ ಸಹಕಾರ ಕೊಡೋದಾದರೆ ಕೊಡಲಿ, ರಾಜಕೀಯ ಮಾಡುತ್ತಾರೆಂದರೆ ಮಾಡಿಕೊಳ್ಳಲಿ ಎಂದು ಟಾಂಗ್ ಕೊಟ್ಟರು.
ಇದು ಏಕವ್ಯಕ್ತಿ ಮಾಡಿರುವುದಾ ಅಥವಾ ಸಂಘಟನೆ ಮಾಡಿರುವುದಾ ನೋಡಬೇಕಿದೆ. ಮಂಗಳೂರು ಬ್ಲಾಸ್ಟ್ಗೂ ಇದಕ್ಕೂ ಸಾಮ್ಯತೆ ಕಾಣಿಸುತ್ತಿದೆ. ನಮ್ಮ ಪೊಲೀಸ್ ಅಧಿಕಾರಿಗಳು ಹೇಳುವ ಪ್ರಕಾರ ಬ್ಲಾಸ್ಟ್ಗೆ ಬಳಸಿರುವ ವಸ್ತುಗಳನ್ನು ನೋಡಿದಾಗ ಮಂಗಳೂರು ಮತ್ತು ಬೆಂಗಳೂರಿನಲ್ಲಿ ಆದ ಸ್ಫೋಟದಲ್ಲಿ ಸಾಮ್ಯತೆ ಇದೆ. ಮಂಗಳೂರು, ಶಿವಮೊಗ್ಗ ಪೊಲೀಸ್ ಅಧಿಕಾರಿಗಳು ಕೂಡ ಬೆಂಗಳೂರಿಗೆ ಬಂದು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಗೂ, ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಗೂ ಸಾಮ್ಯತೆ ಇಲ್ಲ ಎಂದಿದ್ದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…