Featured

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟದ ಸಂತ್ರಸ್ತನಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಎರಡು ಲಕ್ಷ ರೂ. ಪರಿಹಾರ ವಿತರಣೆ – vishwanews24

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟದ ಸಂತ್ರಸ್ತನಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಎರಡು ಲಕ್ಷ ರೂ. ಪರಿಹಾರ ವಿತರಣೆ

ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತನಿಗೆ ರಾಜ್ಯ ಸರ್ಕಾರದ ವತಿಯಿಂದ ಬುಧವಾರ ಎರಡು ಲಕ್ಷ ರೂ. ಪರಿಹಾರ ವಿತರಣೆ ಮಾಡಲಾಯಿತು.

ಕುಕ್ಕರ್ ಬಾಂಬ್ ಸ್ಫೋಟದ ಸಂತ್ರಸ್ತರಾಗಿದ್ದ ಆಟೋ ಚಾಲಕ ಪುರುಷೋತ್ತಮ್ ಪೂಜಾರಿಗೆ ಪರಿಹಾರ ನೀಡಬೇಕು ಎಂದು ಮಾಜಿ ಎಂಎಲ್ ಸಿ ಐವಾನ್ ಡಿಸೋಜಾ ಮನವಿ ಮಾಡಿದ್ದರು. ಅದರಂತೆ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡಲಾಗಿದೆ. ಪರಿಹಾರದ ಚೆಕ್ ಅನ್ನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಡಿಸಿ ಸಂತೋಷ್ ವಿತರಣೆ ಮಾಡಿದರು.

ಪುರುಷೋತ್ತಮ್ ಆಟೋ ಚಾಲಕರಾಗಿ ವೃತ್ತಿ ಜೀವನ ನಡೆಸುತ್ತಿದ್ದರು. ಒಮ್ಮೆ ಆಟೋದಲ್ಲಿ ಪ್ರಯಾಣಿಕರೊಬ್ಬರು ಹಿಡಿದುಕೊಂಡಿದ್ದ ಕುಕ್ಕರ್ ಸಿಡಿದು, ಆಟೋ ರಿಕ್ಷಾ ನಜ್ಜುಗುಜ್ಜಾಗಿತ್ತು. ಪುರುಷೋತ್ತಮ್ ಕೂಡ ತೀವ್ರ ಸ್ವರೂಪದ ಸುಟ್ಟ ಗಾಯಗಳಿಂದ ಬಳಲಿ ಮಂಗಳೂರಿನ ಫಾದ‌ರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದಿರುತ್ತಾರೆ ಪರಿಹಾರ ಸಂಬಂಧಿತ ಆದೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ವಿಶೇಷ ಪ್ರಕರಣ ಎಂದು ಪರಿಹಾರ ಮಂಜೂರು ಮಾಡಿ ಆದೇಶಿಸಲಾಗಿತ್ತು. ನವೆಂಬರ್ 19ರಂದು ಮಂಗಳೂರಿನ ನಾಗುರಿ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿತ್ತು.

2022 ರ ನವೆಂಬರ್ 19 ರಂದು ಮಂಗಳೂರಿನಲ್ಲಿ ರಿಕ್ಷಾದಲ್ಲಿ ಸ್ಫೋಟಗೊಂಡ ಕುಕ್ಕರ್ ಬಾಂಬ್ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಮಂಗಳೂರಿನಲ್ಲಿ 2020 ರಲ್ಲಿ ಬರೆಯಲ್ಪಟ್ಟಿದ್ದ ಭಯೋತ್ಪಾದನೆ ಸಂಬಂಧಿತ ಗೋಡೆ ಬರಹ ಪ್ರಕರಣದ ಆರೋಪಿಯಾಗಿದ್ದ ಮಹಮ್ಮದ್ ಶಾರೀಕ್ ತಂದ ಬಾಂಬ್ ಸ್ಫೋಟಗೊಂಡಿತ್ತು. ಕರ್ನಾಟಕದಲ್ಲಿ ಐಸಿಸ್ ಮಾದರಿ ಕೃತ್ಯಕ್ಕೆ ಆತ ಸಂಚು ಹೂಡಿದ್ದು ಈ ಸ್ಫೋಟದಿಂದ ಬಯಲಾಗಿತ್ತು. ಘಟನೆಯಲ್ಲಿ ಅಮಾಯಕ ರಿಕ್ಷಾ ಚಾಲಕ ಪುರುಷೋತ್ತಮ್ ಪೂಜಾರಿ ಗಾಯಗೊಂಡು ಆಸ್ಪತ್ರೆ ಸೇರುವಂತಾಗಿತ್ತು. ಜತೆಗೆ ಅವರ ರಿಕ್ಷಾ ಕೂಡ ಜಖಂಗೊಂಡಿತ್ತು.

ಈ ಮಧ್ಯೆ, ಬೆಳದಿಂಗಳು ಫೌಂಡೇಶನ್ ಸುಮಾರು​ 6 ಲಕ್ಷ ರೂಪಾಯಿ ವೆಚ್ಚದಲ್ಲಿ ದುರಸ್ತಿಗೊಳಿಸಿದ ನವೀಕೃತ ಮನೆಯನ್ನು ಪುರುಷೋತ್ತಮ್ ಅವರಿಗೆ ಕಳೆದ ವರ್ಷ ಮಾರ್ಚ್​​ನಲ್ಲೇ ಹಸ್ತಾಂತರಿಸಿತ್ತು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

2 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

2 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

2 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

3 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago