ಮಂಗಳೂರು: ಮಂಗಳೂರಿನಲ್ಲಿ ಉಗ್ರವಾದದ ಪರ ಗೋಡೆ ಬರಹ ಪ್ರಕರಣ, ಶಿವಮೊಗ್ಗದಲ್ಲಿ ಉಗ್ರಸಂಚು, ಪ್ರಾಯೋಗಿಕ ಬಾಂಬ್ ಸ್ಟೋಟ ನಡೆಸಿ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ನೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನಲೆಯಲ್ಲಿ ನಗರದ ಹೊರವಲಯದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ರಿಶಾನ್ ಶೇಖ್ ಸಹಿತ ಇಬ್ಬರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ರಿಶಾನ್ ನೊಂದಿಗೆ ಶಿವಮೊಗ್ಗ ಜಿಲ್ಲೆಯ ಟಿಪ್ಪು ಸುಲ್ತಾನ್ ನಗರದ ಹುಜೈರ್ ಫರ್ಹಾನ್ ಬೇಗ್ ಎಂಬಾತನನ್ನೂ ಬಂಧಿಸಲಾಗಿದ್ದು, ಇನ್ನೋರ್ವ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಎನ್ಐಎ ತಿಳಿಸಿದೆ.
ಇನ್ನು ನಡುಪದವಿನ ಖಾಸಗಿ ಎಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ ರಿಶಾನ್ ತಾಜುದ್ದೀನ್ ಶೇಖ್ ನನ್ನು ಎನ್ಐಎ ಬಂಧಿಸಿ ಬೆಂಗಳೂರಿಗೆ ಕರೆದೊಯ್ದಿದಿದ್ದು, ಇವರಿಬ್ಬರೂ ಶಿವಮೊಗ್ಗದ ಪುರಲೆ ಸಮೀಪದ ತುಂಗಾ ನದಿ ತೀರದಲ್ಲಿ ಪ್ರಾಯೋಗಿಕವಾಗಿ ಬಾಂಬ್ ಸ್ಟೋಟ ನಡೆಸಿದ್ದ ಪ್ರಕರಣದಲ್ಲಿ ಬಂಧಿತನಾಗಿರುವ ಮಾಝ್ ಮುನೀರ್ ಜತೆ ನೇರವಾಗಿ ಸಂಪರ್ಕ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.
ರಿಶಾನ್ ತನಗೆ ಮಾಝ್ ಮುನೀರ್ ನ ಪರಿಚಯವಿದೆ ಆದರೆ ಕುಕ್ಕರ್ ಬಾಂಬ್ ಸ್ಟೋಟದ ಆರೋಪಿ ಸಾರೀಕ್ ನ ಪರಿಚಯ ಇಲ್ಲ ಎಂದು ಹೇಳಿರುವುದಾಗಿ ಎನ್ಐಎ ತಿಳಿಸಿದೆ.
ಶಿವಮೊಗ್ಗ ಪ್ರಕರಣದಲ್ಲಿ ಸಯ್ಯದ್ ಯಾಸೀನ್ ಬಂಧನದ ಬಳಿಕ ಮಾಝ್ ಮುನೀರ್ ನನ್ನು ಬಂಧಿಸಿದ್ದು, ಇವರ ಸಹವರ್ತಿಯಾಗಿದ್ದು, ಮಂಗಳೂರಿನ ಗೋಡೆ ಬರಹ ಬರೆದಿದ್ದ ಶಾರೀಕ್ ಮಂಅಳೂರಿನಲ್ಲಿ ಇತ್ತೀಚೆಗೆ ಕುಕ್ಕರ್ ಬಾಂಬ್ ಸ್ಟೋಟದಲ್ಲಿ ಗಾಯಗೊಂಡು ಸಿಕ್ಕಿಬಿದ್ದು ಎನ್ಐಎ ವಶದಲ್ಲಿದ್ದಾನೆ.
ಇನ್ನು ಎನ್ಐಎ ಗುರುವಾರ ವಶಕ್ಕೆ ಪಡೇದಿರುವ ರಿಶಾನ್ ತಾಜುದ್ದೀನ್ ಶೇಖ್ ಶಂಕಿತ ಉಗ್ರ ಮಾಝ್ ಮುನೀರ್ ಸಂಪರ್ಕದಲ್ಲಿರುವುದರ ಹಿನ್ನಲೆಯಲ್ಲಿ ಎನ್ಐಎ ಅಧಿಕಾರಿಗಳು ಆತನಿಗಾಗಿ ಬಲೆ ಬೀಸಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…