Featured

ಮಂಗಳೂರು: ಕುಕ್ಕರ್ ಬಾಂಬ್ ಸ್ಟೋಟ ಪ್ರಕರಣ : ಉಡುಪಿ ಮೂಲದ ವಿದ್ಯಾರ್ಥಿ ರಿಶಾನ್ ಸಹಿತ ಇಬ್ಬರು NIA ವಶಕ್ಕೆ – Vishwanews24

ಮಂಗಳೂರು: ಕುಕ್ಕರ್ ಬಾಂಬ್ ಸ್ಟೋಟ ಪ್ರಕರಣ : ಉಡುಪಿ ಮೂಲದ ವಿದ್ಯಾರ್ಥಿ ರಿಶಾನ್ ಸಹಿತ ಇಬ್ಬರು NIA ವಶಕ್ಕೆ

ಮಂಗಳೂರು: ಮಂಗಳೂರಿನಲ್ಲಿ ಉಗ್ರವಾದದ ಪರ ಗೋಡೆ ಬರಹ ಪ್ರಕರಣ, ಶಿವಮೊಗ್ಗದಲ್ಲಿ ಉಗ್ರಸಂಚು, ಪ್ರಾಯೋಗಿಕ ಬಾಂಬ್ ಸ್ಟೋಟ ನಡೆಸಿ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ನೊಂದಿಗೆ ಸಂಪರ್ಕ ಹೊಂದಿದ್ದ ಹಿನ್ನಲೆಯಲ್ಲಿ ನಗರದ ಹೊರವಲಯದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ರಿಶಾನ್ ಶೇಖ್ ಸಹಿತ ಇಬ್ಬರನ್ನು ಎನ್‍ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ರಿಶಾನ್ ನೊಂದಿಗೆ ಶಿವಮೊಗ್ಗ ಜಿಲ್ಲೆಯ ಟಿಪ್ಪು ಸುಲ್ತಾನ್ ನಗರದ ಹುಜೈರ್ ಫರ್ಹಾನ್ ಬೇಗ್ ಎಂಬಾತನನ್ನೂ ಬಂಧಿಸಲಾಗಿದ್ದು, ಇನ್ನೋರ್ವ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಎನ್‍ಐಎ ತಿಳಿಸಿದೆ.

ಇನ್ನು ನಡುಪದವಿನ ಖಾಸಗಿ ಎಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ ರಿಶಾನ್ ತಾಜುದ್ದೀನ್ ಶೇಖ್ ನನ್ನು ಎನ್‍ಐಎ ಬಂಧಿಸಿ ಬೆಂಗಳೂರಿಗೆ ಕರೆದೊಯ್ದಿದಿದ್ದು, ಇವರಿಬ್ಬರೂ ಶಿವಮೊಗ್ಗದ ಪುರಲೆ ಸಮೀಪದ ತುಂಗಾ ನದಿ ತೀರದಲ್ಲಿ ಪ್ರಾಯೋಗಿಕವಾಗಿ ಬಾಂಬ್ ಸ್ಟೋಟ ನಡೆಸಿದ್ದ ಪ್ರಕರಣದಲ್ಲಿ ಬಂಧಿತನಾಗಿರುವ ಮಾಝ್ ಮುನೀರ್ ಜತೆ ನೇರವಾಗಿ ಸಂಪರ್ಕ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ರಿಶಾನ್ ತನಗೆ ಮಾಝ್ ಮುನೀರ್ ನ ಪರಿಚಯವಿದೆ ಆದರೆ ಕುಕ್ಕರ್ ಬಾಂಬ್ ಸ್ಟೋಟದ ಆರೋಪಿ ಸಾರೀಕ್ ನ ಪರಿಚಯ ಇಲ್ಲ ಎಂದು ಹೇಳಿರುವುದಾಗಿ ಎನ್‍ಐಎ ತಿಳಿಸಿದೆ.

ಶಿವಮೊಗ್ಗ ಪ್ರಕರಣದಲ್ಲಿ ಸಯ್ಯದ್ ಯಾಸೀನ್ ಬಂಧನದ ಬಳಿಕ ಮಾಝ್ ಮುನೀರ್ ನನ್ನು ಬಂಧಿಸಿದ್ದು, ಇವರ ಸಹವರ್ತಿಯಾಗಿದ್ದು, ಮಂಗಳೂರಿನ ಗೋಡೆ ಬರಹ ಬರೆದಿದ್ದ ಶಾರೀಕ್ ಮಂಅಳೂರಿನಲ್ಲಿ ಇತ್ತೀಚೆಗೆ ಕುಕ್ಕರ್ ಬಾಂಬ್ ಸ್ಟೋಟದಲ್ಲಿ ಗಾಯಗೊಂಡು ಸಿಕ್ಕಿಬಿದ್ದು ಎನ್‍ಐಎ ವಶದಲ್ಲಿದ್ದಾನೆ.

ಇನ್ನು ಎನ್‍ಐಎ ಗುರುವಾರ ವಶಕ್ಕೆ ಪಡೇದಿರುವ ರಿಶಾನ್ ತಾಜುದ್ದೀನ್ ಶೇಖ್ ಶಂಕಿತ ಉಗ್ರ ಮಾಝ್ ಮುನೀರ್ ಸಂಪರ್ಕದಲ್ಲಿರುವುದರ ಹಿನ್ನಲೆಯಲ್ಲಿ ಎನ್‍ಐಎ ಅಧಿಕಾರಿಗಳು ಆತನಿಗಾಗಿ ಬಲೆ ಬೀಸಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago