ಮಂಗಳೂರು : ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಕೊಟ್ಟ ಮಾತಿನಂತೆ ಇಂದು(ಮಾ.22) ಗುರುಬೆಳದಿಂಗಳು ಫೌಂಡೇಶನ್ 6 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಿಸಿದ ಮನೆಯನ್ನು ಹಸ್ತಾಂತರಿಸಿದೆ.
2022ರ ನವೆಂಬರ್ 19 ರಂದು ಮಂಗಳೂರು ನಗರದ ಗರೋಡಿ ಸಮೀಪದ ರಸ್ತೆಯಲ್ಲಿ ಹೋಗುತ್ತಿದ್ದಾಗ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿತ್ತು. ಘಟನೆಯಲ್ಲಿ ಗಾಯಗೊಂಡು ಪುರುಷೋತ್ತಮ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೇ ವೇಳೆ ಅವರ ಪುತ್ರಿಯ ಮದುವೆ ನಿಶ್ಚಯವಾಗಿದ್ದರಿಂದ, ಪುರುಷೋತ್ತಮ್ ಮನೆಯ ದುರಸ್ತಿ ಕಾರ್ಯವನ್ನ ಮಾಡಬೇಕೆಂದು ನಿಶ್ಚಯಿಸಿದ್ದರು. ಆದರೆ ಈ ದುರ್ಘಟನೆ ಬಳಿಕ ಮನೆ ದುರಸ್ತಿಯಾಗದೆ ಕಂಗೆಟ್ಟಿದ್ದರು. ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಂಡದೊಂದಿಗೆ ಭೇಟಿಯಾದಾಗ ಪುರುಷೋತ್ತಮ್ ತಮ್ಮ ನೋವನ್ನು ತೋಡಿಕೊಂಡಿದ್ದರು. ಈ ವೇಳೆ ಗುರು ಬೆಳದಿಂಗಲು ಫೌಂಡೇಶನ್ ಅವರು ಮನೆ ನವೀಕರಿಸುವ ಭರವಸೆ ನೀಡಿದ್ದರು.
ಅದರಂತೆ ಇಂದು ಗುರು ಬೆಳದಿಂಗಲು ಫೌಂಡೇಶನ್ ಕೊಟ್ಟ ಮಾತಿನಂತೆ ಮನೆ ನವೀಕರಣಗೊಳಿಸಿ ಯುಗಾದಿ ಹಬ್ಬದ ಗಿಪ್ಟ್ ನೀಡಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…