Featured

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ – ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ  ಸಂತ್ರಸ್ತನಿಗೆ ಸುಸಜ್ಜಿತ ಮನೆ ಹಸ್ತಾಂತರಿಸಿದ ಗುರುಬೆಳದಿಂಗಳು ಟ್ರಸ್ಟ್ – Vishwanews24

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ – ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ  ಸಂತ್ರಸ್ತನಿಗೆ ಸುಸಜ್ಜಿತ ಮನೆ ಹಸ್ತಾಂತರಿಸಿದ ಗುರುಬೆಳದಿಂಗಳು ಟ್ರಸ್ಟ್

ಮಂಗಳೂರು : ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಕೊಟ್ಟ ಮಾತಿನಂತೆ ಇಂದು(ಮಾ.22) ಗುರುಬೆಳದಿಂಗಳು ಫೌಂಡೇಶನ್ 6 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಿಸಿದ ಮನೆಯನ್ನು ಹಸ್ತಾಂತರಿಸಿದೆ.

2022ರ ನವೆಂಬರ್ 19 ರಂದು ಮಂಗಳೂರು ನಗರದ ಗರೋಡಿ ಸಮೀಪದ ರಸ್ತೆಯಲ್ಲಿ ಹೋಗುತ್ತಿದ್ದಾಗ ಆಟೋದಲ್ಲಿ ಕುಕ್ಕರ್​ ಬಾಂಬ್​ ಸ್ಫೋಟವಾಗಿತ್ತು. ಘಟನೆಯಲ್ಲಿ ಗಾಯಗೊಂಡು ಪುರುಷೋತ್ತಮ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೇ ವೇಳೆ ಅವರ ಪುತ್ರಿಯ ಮದುವೆ ನಿಶ್ಚಯವಾಗಿದ್ದರಿಂದ, ಪುರುಷೋತ್ತಮ್ ಮನೆಯ ದುರಸ್ತಿ ಕಾರ್ಯವನ್ನ ಮಾಡಬೇಕೆಂದು ನಿಶ್ಚಯಿಸಿದ್ದರು. ಆದರೆ ಈ ದುರ್ಘಟನೆ ಬಳಿಕ ಮನೆ ದುರಸ್ತಿಯಾಗದೆ ಕಂಗೆಟ್ಟಿದ್ದರು. ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಂಡದೊಂದಿಗೆ ಭೇಟಿಯಾದಾಗ ಪುರುಷೋತ್ತಮ್ ತಮ್ಮ ನೋವನ್ನು ತೋಡಿಕೊಂಡಿದ್ದರು. ಈ ವೇಳೆ ಗುರು ಬೆಳದಿಂಗಲು ಫೌಂಡೇಶನ್ ಅವರು ಮನೆ ನವೀಕರಿಸುವ ಭರವಸೆ ನೀಡಿದ್ದರು.

ಅದರಂತೆ ಇಂದು ಗುರು ಬೆಳದಿಂಗಲು ಫೌಂಡೇಶನ್ ಕೊಟ್ಟ ಮಾತಿನಂತೆ ಮನೆ ನವೀಕರಣಗೊಳಿಸಿ ಯುಗಾದಿ ಹಬ್ಬದ ಗಿಪ್ಟ್​ ನೀಡಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

8 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago