Featured

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ – ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ  ಸಂತ್ರಸ್ತನಿಗೆ ಸುಸಜ್ಜಿತ ಮನೆ ಹಸ್ತಾಂತರಿಸಿದ ಗುರುಬೆಳದಿಂಗಳು ಟ್ರಸ್ಟ್ – Vishwanews24

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ – ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ  ಸಂತ್ರಸ್ತನಿಗೆ ಸುಸಜ್ಜಿತ ಮನೆ ಹಸ್ತಾಂತರಿಸಿದ ಗುರುಬೆಳದಿಂಗಳು ಟ್ರಸ್ಟ್

ಮಂಗಳೂರು : ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಕೊಟ್ಟ ಮಾತಿನಂತೆ ಇಂದು(ಮಾ.22) ಗುರುಬೆಳದಿಂಗಳು ಫೌಂಡೇಶನ್ 6 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಿಸಿದ ಮನೆಯನ್ನು ಹಸ್ತಾಂತರಿಸಿದೆ.

2022ರ ನವೆಂಬರ್ 19 ರಂದು ಮಂಗಳೂರು ನಗರದ ಗರೋಡಿ ಸಮೀಪದ ರಸ್ತೆಯಲ್ಲಿ ಹೋಗುತ್ತಿದ್ದಾಗ ಆಟೋದಲ್ಲಿ ಕುಕ್ಕರ್​ ಬಾಂಬ್​ ಸ್ಫೋಟವಾಗಿತ್ತು. ಘಟನೆಯಲ್ಲಿ ಗಾಯಗೊಂಡು ಪುರುಷೋತ್ತಮ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೇ ವೇಳೆ ಅವರ ಪುತ್ರಿಯ ಮದುವೆ ನಿಶ್ಚಯವಾಗಿದ್ದರಿಂದ, ಪುರುಷೋತ್ತಮ್ ಮನೆಯ ದುರಸ್ತಿ ಕಾರ್ಯವನ್ನ ಮಾಡಬೇಕೆಂದು ನಿಶ್ಚಯಿಸಿದ್ದರು. ಆದರೆ ಈ ದುರ್ಘಟನೆ ಬಳಿಕ ಮನೆ ದುರಸ್ತಿಯಾಗದೆ ಕಂಗೆಟ್ಟಿದ್ದರು. ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಂಡದೊಂದಿಗೆ ಭೇಟಿಯಾದಾಗ ಪುರುಷೋತ್ತಮ್ ತಮ್ಮ ನೋವನ್ನು ತೋಡಿಕೊಂಡಿದ್ದರು. ಈ ವೇಳೆ ಗುರು ಬೆಳದಿಂಗಲು ಫೌಂಡೇಶನ್ ಅವರು ಮನೆ ನವೀಕರಿಸುವ ಭರವಸೆ ನೀಡಿದ್ದರು.

ಅದರಂತೆ ಇಂದು ಗುರು ಬೆಳದಿಂಗಲು ಫೌಂಡೇಶನ್ ಕೊಟ್ಟ ಮಾತಿನಂತೆ ಮನೆ ನವೀಕರಣಗೊಳಿಸಿ ಯುಗಾದಿ ಹಬ್ಬದ ಗಿಪ್ಟ್​ ನೀಡಿದ್ದಾರೆ.

Vishwa News 24

Recent Posts

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ – vishwanews24

ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…

8 hours ago

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ – vishwanews24

ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…

9 hours ago

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ – vishwanews24

ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ  ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…

9 hours ago

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…

9 hours ago

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ -vishwanews24

ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…

10 hours ago

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ -vishwanews24

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…

10 hours ago