ಮಂಗಳೂರು: ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ನ. 19ರಂದು ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್ ಶಾರೀಕ್ ನನ್ನು ರಾಜ್ಯ ರಾಜಧಾನಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಮೊಹಮ್ಮದ್ ಶಾರೀಕ್ ಗಂಭೀರ ಗಾಯಗಳಿಂದ ಚೇತರಿಸಿಕೊಂಡಿದ್ದರು, ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಹಿನ್ನಲೆಯಲ್ಲಿ ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ಸೆಂಟರ್ ನಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದಾರೆ.
ಡಿ.17 ರ ಮುಂಜಾನೆ 6 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದ್ದು, ಇನ್ನು ಅಲ್ಲಿಂದಲೇ ಎನ್ಐಎ ತನಿಖೆ ಚುರುಕುಗೊಳಿಸಲಿದ್ದು, ಸ್ಪೋಟದ ಹಿಂದಿನ ಆತನ ಉದ್ದೇಶ, ಹಿಂದಿರುವ ಶಕ್ತಿಗಳನ್ನು ಹೊರಗೆಡವಲಿದೆ.
ನ.19ರ ಶನಿವಾರ ಸಂಜೆ ನಾಗುರಿ ಬಳಿ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಸಂಭವಿಸಿದ ಸಂದರ್ಭ ಗಂಭೀರ ಗಾಯಗೊಂಡಿದ್ದ ಶಾರೀಕ್ನನ್ನು ಕಂಕನಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತನ ಶ್ವಾಸಕೋಶದೊಳಗೆ ಹೊಗೆ ತುಂಬಿದ್ದರಿಂದ ಆರೋಗ್ಯ ಹದಗೆಟ್ಟಿತ್ತು. ಆತನ ಕಣ್ಣಿಗೂ ಹಾನಿಯಾಗಿತ್ತು. ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ಇದೀಗ ಚೇತರಿಕೆ ಕಂಡಿದ್ದು ಬೆಂಗಳೂರಿಗೆ ಶಿಫ್ಟ್ ಆದ ಹಿನ್ನಲೆ ಎನ್.ಐ.ಎ ಕಚೇರಿಯಲ್ಲಿ ಶಾರೀಕ್ ನ ವಿಚಾರಣೆ ಮುಂದುವರಿಯಲಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…