Featured

ಮಂಗಳೂರು: ಕುಕ್ಕರ್ ಸ್ಫೋಟದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಮನೆ ನವೀಕರಣ – Vishwanews24

ಮಂಗಳೂರು: ಕುಕ್ಕರ್ ಸ್ಫೋಟದಲ್ಲಿ ಗಾಯಗೊಂಡಿದ್ದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಮನೆ ನವೀಕರಣ..

ಮನೆ ನವೀಕರಿಸುವ ಜವಾಬ್ದಾರಿ ಹೊತ್ತ ‘ಗುರುಬೆಳದಿಂಗಳು ಫೌಂಡೇಶನ್..

ಮಂಗಳೂರು: ಇತ್ತೀಚೆಗೆ ಆಟೋರಿಕ್ಷಾದಲ್ಲಿ ಕುಕ್ಕರ್ ಸ್ಫೋಟಗೊಂಡು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕ ಉಜ್ಜೋಡಿಯ ಪುರುಷೋತ್ತಮ ಪೂಜಾರಿಯವರ ಮನೆ ನವೀಕರಣ ‘ಗುರುಬೆಳದಿಂಗಳು ಫೌಂಡೇಶನ್’ ಮೂಲಕ ಶೀಘ್ರ ಆರಂಭಗೊಳ್ಳಲಿದೆ.

ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ರವರು, ಘಟನೆ ನಡೆದ ಮರುದಿನವೇ ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬ ಸದಸ್ಯರೊಂದಿಗೆ ಮಾತನಾಡಿ ಅವರ ಆರೋಗ್ಯದ ಬಗ್ಗೆ ನಿಗಾ ಇಟ್ಟುಕೊಂಡು ಫಾದರ್‌ಮುಲ್ಲರ್ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್ ಜತೆ ಮಾತುಕತೆ ನಡೆಸಿದ ಬೇಕಾದ ವ್ಯವಸ್ಥೆ ಮಾಡಿದ್ದರು.

ಬಳಿಕವೂ ಪುರುಷೋತ್ತಮ ಪೂಜಾರಿ ಮತ್ತು ಕುಟುಂಬದವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿಕೊಳ್ಳುತ್ತಾ ಬಂದಿದ್ದಾರೆ. ಆದರೆ ಕಳೆದ ವಾರ ಆಸ್ಪತ್ರೆಯಲ್ಲಿರುವ ಪುರುಷೋತ್ತಮ ಪೂಜಾರಿಯವರನ್ನು ಭೇಟಿಯಾದಾಗ ತನ್ನ ನೋವಿನ ಜತೆಗೆ ಬರುವ ಮೇ ತಿಂಗಳಿನಲ್ಲಿ ಮಗಳ ಮದುವೆ ಮಾಡಬೇಕು, ಅದಕ್ಕಿಂತ ಮೊದಲು ಮನೆಯನ್ನು ನವೀಕರಣಗೊಳಿಸಬೇಕು ಎನ್ನುವ ನನ್ನ ಕನಸು ನನಸು ಮಾಡಲು ಸಾಧ್ಯವಾಗಿಲ್ಲ ಎಂಬ ನೋವಿನಿಂದ ಆತ್ಮವಿಶ್ವಾಸ ಕಳೆದುಕೊಂಡು ಮತ್ತಷ್ಟು ನೊಂದುಕೊಂಡು ದುಃಖವನ್ನು ವ್ಯಕ್ತಪಡಿಸಿದ್ದರು.

ಈ ವೇಳೆ ಮನೆಯನ್ನು ನವೀಕರಿಸುವ ಜವಾಬ್ದಾರಿಯನ್ನು ‘ಗುರುಬೆಳದಿಂಗಳು ಫೌಂಡೇಶನ್’ ಮಾಡಲಿದೆ ಎಂದು ಪದ್ಮರಾಜ್‌ರವರು ಅವರಿಗೆ ಆತ್ಮಸ್ಥೈರ್ಯ ನೀಡಿದ್ದರು. ಅದರಂತೆ ಭಾನುವಾರ (ಡಿ.18) ಪುರುಷೋತ್ತಮ ಪೂಜಾರಿಯವರ ಮನೆಗೆ ಇಂಜಿನಿಯರ್ ದೀವರಾಜ್‌ರೊಂದಿಗೆ ಭೇಟಿ ನೀಡಿದ ಪದ್ಮರಾಜ್ ಆರ್.ರವರು ಕುಟುಂಬ ಸದಸ್ಯರೊಂದಿಗೆ ಮಾತನಾಡಿ, ಮನೆಯನ್ನು ಪರಿಶೀಲಿಸಿ ನವೀಕರಣಗೊಳಿಸುವ ಭರವಸೆ ನೀಡಿದ್ದು, ಮುಂದಿನ ವಾರದಿಂದ ಕಾಮಗಾರಿ ನಡೆಸುವುದಾಗಿ ತಿಳಿಸಿದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

5 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

5 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

6 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

6 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

10 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

10 hours ago