ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ: ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ರಿಕ್ಷಾ ಹಸ್ತಾಂತರ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು ಕುಕ್ಕರ್ ಪ್ರಕರಣ: ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ರಿಕ್ಷಾ ಹಸ್ತಾಂತರ

ಮಂಗಳೂರು : ಮಂಗಳೂರು ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ ರಿಕ್ಷಾ ಮತ್ತು 5 ಲಕ್ಷ ರೂಪಾಯಿ ಮೌಲ್ಯದ ಚೆಕ್ ಹಸ್ತಾಂತರಿಸಲಾಯಿತು.

ಈ ವೇಳೆ ಮಾತನಾಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಕುಕ್ಕರ್ ಬಾಂಬ್ ಸ್ಫೋಟಿಸುವ ಮೂಲಕ ಭಾರತವನ್ನು ಇಸ್ಲಾಮಿಕ್ ರಾಷ್ಟ್ರ ಮಾಡುವ ಹುನ್ನಾರ ಈಗಾಗಲೇ ಬಯಲಾಗಿದೆ. ಎನ್‌ಐಎ ಅಧಿಕಾರಿಗಳೇ ಇದನ್ನು ಬಹಿರಂಗ ಪಡಿಸಿದ್ದು, ಕೃತ್ಯದ ಕುರಿತು ಅಪಹಾಸ್ಯ ಮಾಡಿದವರು, ಸ್ಫೋಟ ಮಾಡಿದವರನ್ನು ಅಮಾಯಕರು ಎಂದು ಹೇಳಿದ್ದ ಕಾಂಗ್ರೆಸಿಗರು ಈಗ ಏನು ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು.

ಲಂಚ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ – Vishwanews24

ಇದೇ ವೇಳೆ ಮತನಾಡಿದ ಅವರು ಇದೇ ಮತಬ್ಯಾಂಕ್, ತುಷ್ಠೀಕರಣದ ರಾಜಕೀಯವನ್ನು ಬಿಜೆಪಿ ಸಹಿಸುವುದಿಲ್ಲ ಎಂದರು. ಕಳೆದ ವರ್ಷ ನವೆಂಬರ್ 19 ರಂದು ಕಂಕನಾಡಿ ಗರೋಡಿ ಬಳಿ ಆಟೋದಲ್ಲಿ ಸಂಭವಿಸಿತ್ತು. ಘಟನೆಯಲ್ಲಿ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ಸಂದೀಪ್ ಗರೋಡಿ, ಸುಧೀರ್ ಶೆಟ್ಟಿ, ಶರಣ್ ಪಂಪ್‌ವೆಲ್ ಮೊದಲಾದವರು ಉಪಸ್ಥಿತರಿದ್ದರು.

ಉಡುಪಿ: ಪಾನ್ ಅಪ್ಡೇಟ್ ಹೆಸರಲ್ಲಿ ಲಿಂಕ್ ಕಳುಹಿಸಿ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು – Vishwanews24

Leave a Reply