ಮಂಗಳೂರು : ಮಂಗಳೂರು ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಬಿಜೆಪಿ ಪಕ್ಷದ ವತಿಯಿಂದ ನೂತನ ಆಟೋ ರಿಕ್ಷಾ ಮತ್ತು 5 ಲಕ್ಷ ರೂಪಾಯಿ ಮೌಲ್ಯದ ಚೆಕ್ ಹಸ್ತಾಂತರಿಸಲಾಯಿತು.
ಈ ವೇಳೆ ಮಾತನಾಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಕುಕ್ಕರ್ ಬಾಂಬ್ ಸ್ಫೋಟಿಸುವ ಮೂಲಕ ಭಾರತವನ್ನು ಇಸ್ಲಾಮಿಕ್ ರಾಷ್ಟ್ರ ಮಾಡುವ ಹುನ್ನಾರ ಈಗಾಗಲೇ ಬಯಲಾಗಿದೆ. ಎನ್ಐಎ ಅಧಿಕಾರಿಗಳೇ ಇದನ್ನು ಬಹಿರಂಗ ಪಡಿಸಿದ್ದು, ಕೃತ್ಯದ ಕುರಿತು ಅಪಹಾಸ್ಯ ಮಾಡಿದವರು, ಸ್ಫೋಟ ಮಾಡಿದವರನ್ನು ಅಮಾಯಕರು ಎಂದು ಹೇಳಿದ್ದ ಕಾಂಗ್ರೆಸಿಗರು ಈಗ ಏನು ಹೇಳುತ್ತಾರೆ ಎಂದು ವ್ಯಂಗ್ಯವಾಡಿದರು.
ಇದೇ ವೇಳೆ ಮತನಾಡಿದ ಅವರು ಇದೇ ಮತಬ್ಯಾಂಕ್, ತುಷ್ಠೀಕರಣದ ರಾಜಕೀಯವನ್ನು ಬಿಜೆಪಿ ಸಹಿಸುವುದಿಲ್ಲ ಎಂದರು. ಕಳೆದ ವರ್ಷ ನವೆಂಬರ್ 19 ರಂದು ಕಂಕನಾಡಿ ಗರೋಡಿ ಬಳಿ ಆಟೋದಲ್ಲಿ ಸಂಭವಿಸಿತ್ತು. ಘಟನೆಯಲ್ಲಿ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ಗಂಭೀರವಾಗಿ ಗಾಯಗೊಂಡಿದ್ದರು.
ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ಸಂದೀಪ್ ಗರೋಡಿ, ಸುಧೀರ್ ಶೆಟ್ಟಿ, ಶರಣ್ ಪಂಪ್ವೆಲ್ ಮೊದಲಾದವರು ಉಪಸ್ಥಿತರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…