ಮಂಗಳೂರು: ಕುಚ್ಚಲಕ್ಕಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೆ.ಜಿ.ಗೆ 15ರಿಂದ 20 ರೂ. ಹೆಚ್ಚಳವಾಗಿ 48 ರಿಂದ 50 ರೂ. ನಲ್ಲಿ ಮಾರಾಟವಾಗುತ್ತಿರುವ ಹಿನ್ನಲೆಯಲ್ಲಿ ಕರಾವಳಿಯ ಜನತೆ ಕಂಗಾಲಾಗಿದ್ದಾರೆ.
ಕುಚ್ಚಲಕ್ಕಿ ಬೆಲೆಯಲ್ಲಿ ಭಾರೀ ಹೆಚ್ಚಳವಾದರೂ, ಭತ್ತದ ಬೆಲೆ ಕೆ.ಜಿ.ಗೆ 2-3 ರೂ. ಮಾತ್ರ ಏರಿಕೆಯಾಗಿದೆ ಎಂದು ರೈತರು ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನ್ನು ಖಾಸಗಿ ಮಿಲ್ಗಳಲ್ಲಿ ಸ್ಥಳೀಯ ಭತ್ತಕ್ಕೆ ಕ್ವಿಂಟಾಲ್ಗೆ 2,500-2,600 ರೂ. ಇದೆ. ಕಟಾವು ಚುರುಕುಗೊಂಡ ತಕ್ಷಣ ಬೆಲೆ ಇಳಿಮುಖವಾಗುವ ಭೀತಿಯೂ ಎದುರಾಗಿದೆ.
ಕರಾವಳಿ ಸೇರಿದಂತೆ ಮಲೆನಾಡು, ಬಯಲುಸೀಮೆ ಭಾಗದಲ್ಲೂ ಕಾರ್ಮಿಕರ ಕೊರತೆ, ಬೆಲೆಯ ಅಸ್ಥಿರತೆ ಇತ್ಯಾದಿ ಕಾರಣಕ್ಕೆ ಭತ್ತದ ಬೇಸಾಯ ಕುಸಿತ ಕಂಡಿದ್ದು, ಇದರಿಂದಾಗಿ ಕುಚ್ಚಲಕ್ಕಿ ಬೆಲೆ ಏರಿಕೆಯಾಗಿದೆ. ಆದರೆ ಮಧ್ಯವರ್ತಿಗಳು ಭತ್ತದ ಬೆಳೆಯನ್ನು ಏರದಂತೆ ತಡೆಯುತ್ತಿದ್ದಾರೆ ಎಂದು ರೈತರು ಆರೋಪವನ್ನು ಮಾಡುತ್ತಿದ್ದಾರೆ.
ಭತ್ತ ಹಾಗೂ ಅಕ್ಕಿ ನಡುವಿನ ಬೆಲೆ ವ್ಯತ್ಯಾಸವನ್ನು ಸರಿಪಡಿಸಿ ರೈತರಿಗೆ ನ್ಯಾಯ ಒದಗಿಸಲು ಸರಕಾರ ಮಧ್ಯಪ್ರವೇಶಿಸಿ ಕೂಡಲೇ ಭತ್ತಕ್ಕೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸಬೇಕು. ಅದಕ್ಕಿಂತ ಕಡಿಮೆ ಬೆಲೆಯಲ್ಲಿ ಭತ್ತ ಖರೀದಿಸದಂತೆ ಖಾಸಗಿಯವರಿಗೆ ಕಡಿವಾಣ ಹಾಕುವ ವ್ಯವಸ್ಥೆ ಜಾರಿಯಾಗಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…